Belgavi factory fire Case: ಸುಟ್ಟು ಕರಕಲಾದ ಮಗನ ಮೂಳೆಗಳನ್ನು ತಂದೆಗೆ ಕೈಚೀಲದಲ್ಲಿ ತುಂಬಿಕೊಟ್ಟ ಅಧಿಕಾರಿಗಳು-ಆಕ್ರೋಶ
ಬೆಳಗಾವಿ, ಆಗಸ್ಟ್, 08: ಬೆಳಗಾವಿಯ ಸ್ನೇಹಂ ಎಂಬ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದು, ದೊಡ್ಡ ಅನಾಹುತವೇ ನಡೆದಿದೆ. ಘಟನೆಯಲ್ಲಿ ಓರ್ವ ಯುವಲ ಸಜೀವ ದಹನವಾಗಿದ್ದು, 16 ಗಂಟೆಗಳ ಕಾರ್ಯಾಚರಣೆ ಬಳಿಕ ಮೃತನ ಮೂಳೆಗಳು ಲಭ್ಯವಾಗಿದೆ.
ಆದರೆ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (19) ಅವರ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ಅವರ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿದ್ದು, ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮನೆಯ ನಿರ್ವಹಣೆ ಜವಾಬ್ದಾರಿ ಹೊತ್ತು ಕಾರ್ಖಾನೆಗೆ ಕೆಲಸಕ್ಕೆ ಸೇರಿಕೊಂಡಿದ್ದ ಯಲ್ಲಪ್ಪ ಕಾರ್ಖಾನೆಗೆ ಬಿದ್ದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾನೆ. ಇನ್ನು ಆತನ ಸುಟ್ಟು ಕರಕಲಾಗಿ ಮೂಳೆಗಳು ಮಾತ್ರ ಸಿಕ್ಕಿದ್ದು, ಆ ಮೂಳೆಗಳನ್ನು ಕೈಚೀಲದಲ್ಲಿ ತುಂಬಿ ತಂದೆಯ ಕೈಗೆ ಕೊಡಲಾಗಿದೆ. ಈ ದೃಶ್ಯ ಎಂಥಹವರ ಮನಕಲುಕುವಂತಿದೆ.
ಸಾವನ್ನಪ್ಪಿದ ಮಗನ ಮೂಳೆಗಳನ್ನು ಕೈಯಲ್ಲಿ ಹಿಡಿದು ತಂದೆ ಕಣ್ಣೀರು ಹಾಕಿದ್ದು, ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ರೀತಿ ಕೈ ಚೀಲದಲ್ಲಿ ಮೂಳೆಗಳನ್ನು ಹಾಕಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದೆ, ಮೃತದೇಹ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದೆ, ಮೂಳೆಗಳನ್ನು ಚೀಲದಲ್ಲಿ ನೀಡಿ ಅಮಾನವೀಯತೆ ಮೆರೆದಿದ್ದಾರೆ ಎಂದು ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಘಾಟನೆ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಈ ಸ್ನೇಹಂ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅಲ್ಲದೆ, ಮಾರ್ಕಂಡೇಯ ನಗರ ನಿವಾಸಿ ಆಗಿದ್ದ ಯಲ್ಲಪ್ಪ ಗುಂಡ್ಯಾಗೋಳ(19) ಬೆಂಕಿಯಲ್ಲಿ ಬೆಂದು ಸಜೀವದಹನವಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮನೆ ನಿರ್ವಹಣೆಗಾಗಿ ಯಲ್ಲಪ್ಪ ಕೆಲಸಕ್ಕೆ ಸೇರಿದ್ದ. ನಿನ್ನೆ ಸಂಜೆ 7 ಗಂಟೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಕಾರ್ಖಾನೆಗೆ ಬೆಂಕಿ ಬಿದ್ದಿದ್ದು, ಸಮಯ ಕಳೆಯುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಡಳಿತ ತಂಡ ಬೆಂಕಿ ಕೆನ್ನಾಲಿಗೆ ನಂದಿಸಲು ಮುಂದಾದರು. ರಾತ್ರಿಯಿಡೀ 8 ಅಗ್ನಿ ಶಾಮಕ ವಾಹನಗಳು, ಖಾಸಗಿ ನೀರಿನ ಟ್ಯಾಂಕರ್ಗಳ ಮೂಲಕ ಬೆಂಕಿ ನಂದಿಸುವ ಕೆಲಸವನ್ನು ಮಾಡಲಾಯಿತು.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಹ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಸತತ 16 ಗಂಟೆಯ ಕಾರ್ಯಾಚರಣೆಯ ಬಳಿಕ ಯಲ್ಲಪ್ಪ ಗುಂಡ್ಯಾಗೋಳ ಇರುವ ಸ್ಥಳವನ್ನು ಅಧಿಕಾರಿಗಳು ತಲುಪಿದ್ದರು. ಜೆಸಿಬಿ ಮೂಲಕ ಗೋಡೆ ಹೊಡೆದು ಸುಟ್ಟು ಕರಕಲಾಗಿದ್ದ ಯಲಪ್ಪನ ದೇಹದ ಮೂಳೆಗಳನ್ನು ಹೊರ ತೆಗೆದರು. ಬಳಿಕ ಕುಟುಂಬಸ್ಥರು, ತಹಶೀಲ್ದಾರ್, ಡಿಎಚ್ಒ ಸ್ಥಳ ಪಂಚನಾಮೆ ಮಾಡಿ ಮೂಳೆಯೊಂದನ್ನು ಡಿಎನ್ಎ ಟೆಸ್ಟ್ಗೆ ಎಫ್ಎಸ್ಎಲ್ ತಂಡ ರವಾನೆ ಮಾಡಿತು. ಬಳಿಕ ಉಳಿದ ಮೂಳೆಗಳನ್ನು ಕುಟುಂಬಸ್ಥರಿಗೆ ಚೀಲದಲ್ಲಿ ನೀಡಲಾಗಿದ್ದು, ಇದಕ್ಕೆ ಇದೀಗ ಇಡೀ ರಾಜ್ಯಾದ್ಯಂತ ಆಕ್ರೊಶಗಳು ಭುಗಿಲೆದ್ದಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications