Turmeric Price: ದಾಖಲೆ ಮಟ್ಟಕ್ಕೆ ಮಾರಾಟವಾದ ಬೆಳಗಾವಿ ರೈತ ಬೆಳೆದ ಅರಿಶಿಣ
ಬೆಳಗಾವಿ, ಮಾರ್ಚ್ 22: ಈ ಬಾರಿ ರಾಜ್ಯದಲ್ಲಿ ಎದುರಾದ ಬರಗಾಲ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆಗೆ ನೀರಿಲ್ಲ, ಏನೇ ಮಾಡಿದರು ಉತ್ತಮ ಗುಣಮಟ್ಟದ ಬೆಳೆ ಸಿಗುತ್ತಿಲ್ಲ, ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ ಈ ಎಲ್ಲಾ ಕಾರಣಗಳಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಆದರೆ ಈ ಎಲ್ಲಾ ಗೋಳಾಟಗಳ ನಡುವೆ ಇಲ್ಲೊಬ್ಬ ರೈತ ತಾವು ಬೆಳೆದ ಬೆಳೆಗೆ ನಿರೀಕ್ಷೆಗೂ ಮೀರಿದ ಲಾಭ ಗಳಿಸಿ ನೆಮ್ಮದಿಯ ನಗು ಬೀರಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ರೈತನೊಬ್ಬ ಬೆಳೆದ ಅರಿಶಿಣ ಇಡೀ ಭಾರತದಲ್ಲಿ ದಾಖಲೆ ಮಟ್ಟಕ್ಕೆ ಮಾರಾಟವಾಗಿ ಎಲ್ಲರ ಗಮನ ಸೆಳೆಯುವಂತೆ ಮಾಡಿದ್ದಾರೆ. ಕೋಹಳ್ಳಿ ಗ್ರಾಮದ ರೈತ ಸೈಬಣ್ಣ ಭೂಪತಿ ಪೂಜಾರಿ ಅವರ ಅರಿಶಿನ ಭಾರತದಲ್ಲಿ ಅಚ್ಚರಿಯ ದರಕ್ಕೆ ಮಾರಾಟವಾಗಿದೆ. ಪ್ರತಿ ಕ್ವಿಂಟಲ್ಗೆ ಬರೋಬ್ಬರಿ 41,101 ರೂಪಾಯಿಯ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ರೈತ ಸೈಬಣ್ಣ ಭೂಪತಿ ಪೂಜಾರಿ ಶೈಲಂ ತಳಿಯ ಅರಿಶಿನ ಬಿಜ ನಾಟಿ ಮಾಡಿ ಉತ್ತಮ ಇಳುವರಿ ಪಡೆದಿದ್ದಾರೆ. ಈಗಾಗಲೇ 18 ಕ್ವಿಂಟಲ್ ಅರಿಶಿನ ಮಾರಾಟವಾಗಿದ್ದು 7ಲಕ್ಷ ರೂ. ನಿವ್ವಳ ಲಾಭ ಪಡೆದಿದ್ದಾರೆ. ಪ್ರತಿ ಎಕ್ಕರೆಗೆ 30 ಸಾವಿರ ಖರ್ಚು ಮಾಡಿದ ಇವರು ಮೂರು ಎಕ್ಕರೆ ಅರಿಶಿನದಿಂದ ಅಂದಾಜು 30 ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದಾರೆ.
25 ಸಾವಿರ ರೂಪಾಯಿಗೆ ಅರಶಿನ ಮಾರಾಟ ಮಾಡಿದ ಭರಮನಕೊಡಿ ರೈತ
ರಾಜ್ಯಾದ್ಯಂತ ದಟ್ಟವಾದ ಬರಗಾಲದ, ಇಂತಹದರಲ್ಲಿ ಅರಿಶಿನ ಬೆಳೆ ಬೆಳೆದು ಮಾದರಿಯಾಗಿದ್ದು ಶ್ಲಾಘನೀಯವಾಗಿದೆ. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಅರಿಶಿನ ಬೆಳೆಯಲಾಗುತ್ತದೆ. ಇದೀಗ ಅರಿಶಿನಕ್ಕೆ ಚಿನ್ನದ ದರ ಕಂಡ ರೈತರು ಫುಲ್ ಖುಷಿಯಾಗಿದ್ದಾರೆ.
ಈ ವರ್ಷ ಅರಿಶಿನ ಎರಡು ದಶಕಗಳಲ್ಲಿ ಇಲ್ಲದ ಇತಿಹಾಸ ಸೃಷ್ಟಿಸಿದೆ. ರೈತರ ನಿರೀಕ್ಷೆಗೂ ಮೀರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಪ್ರತಿವರ್ಷ ಕೇವಲ ಐದರಿಂದ ಆರು ಸಾವಿರ ದರಕ್ಕೆ ಮಾರಾಟವಾಗುತ್ತಿದ್ದ ಅರಿಶಿನ, ಈ ವರ್ಷ ಕ್ವಿಂಟಾಲ್ಗೆ ಬರೋಬ್ಬರಿ 25 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಅದಕ್ಕೆ ಬೆಳಗಾವಿ ರೈತರು ಖುಷಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಭರಮನಕೊಡಿ ಗ್ರಾಮದ ರೈತ ಸಿದ್ರಾಯ ಕೈರಿ ಕೇವಲ 30 ಗುಂಟೆಯಲ್ಲಿ 20 ಕ್ವಿಂಟಾಲ್ ಅರಿಶಿನ ಬೆಳೆದು, ಉತ್ತಮ ಲಾಭ ಗಳಿಸಿದ್ದಾರೆ. 4 ಲಕ್ಷ ಆದಾಯದ ನಿರೀಕ್ಷೆಯಲ್ಲಿದ್ದಾರೆ.
ಅರಿಶಿನ 11 ತಿಂಗಳ ವಾರ್ಷಿಕ ಬೆಳೆಯಾಗಿದ್ದು, ಪ್ರಕೃತಿ ಸಹಕಾರದ ಜೊತೆ ಜೊತೆಗೆ ರೈತರು ಕಷ್ಟ ಪಡುತ್ತಾರೆ. ಅರಿಶಿನ ಬೆಳೆ ಬೆಳೆಯುವ ಪೂರ್ವ ಸಿದ್ಧತೆಗೆ ಮೊದಲು, ಗದ್ದೆಗೆ ಕೊಟ್ಟಿಗೆ ಗೊಬ್ಬರ ಬಹಳ ಅವಶ್ಯಕವಾಗಿರುತ್ತದೆ. ಅರಿಶಿನ ನಾಟಿಗೂ ಮುನ್ನ ಗದ್ದೆಯನ್ನ ಸಂಪೂರ್ಣ ಹದಗೊಳಿಸಬೇಕು. ಸಾಲಿನಿಂದ ಸಾಲಿಗೆ 3 ಅಡಿ ಅಂತರದಲ್ಲಿ ಸಾಲು ಕೊರೆಯಿಸಿ ಪ್ರತಿ ಬೀಜದಿಂದ ಬೀಜಕ್ಕೆ 1 ಅಡಿ ಅಂತರ ಬಿಟ್ಟು ನಾಟಿ ಮಾಡಬೇಕು. ಒಟ್ಟು 30 ಗುಂಟೆ ಅರಿಶಿನ ನಾಟಿ ಮಾಡಲು 15 ಕ್ವಿಂಟಲ್ ಕಡಪಾ ಥಳಿಯ ಬೀಜ ಬಳಸಲಾಗಿದೆ ಎನ್ನಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications