ಘಟಪ್ರಭಾ ನದಿ ನೀರು ಇಳಿಕೆ: ನಿಟ್ಟುಸಿರು ಬಿಟ್ಟ ಗೋಕಾಕ್ ಜನತೆ
ಬೆಳಗಾವಿ, ಆಗಸ್ಟ್ 20: ಘಟಪ್ರಭಾ ನದಿಯ ಪ್ರವಾಹದ ಕರಾಳ ಛಾಯೆಯಿಂದ ಕಂಗೆಟ್ಟಿದ ಗೋಕಾಕ್ ತಾಲೂಕಿನ ಜನತೆ ಬುಧವಾರದಂದು ನಿಟ್ಟುಸಿರು ಬಿಟ್ಟಿದ್ದಾರೆ. ಗಡಿಭಾಗದ ಜಲಾಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗುತ್ತಿರುವುದರಿಂದ ಪ್ರವಾಹದಲ್ಲಿ ಇಳಿಮುಖವಾಗಿ ಸಂತ್ರಸ್ಥರಲ್ಲಿ ತುಸು ನೆಮ್ಮದಿ ಮೂಡಿದೆ.
ವರುಣ ಇಂದು ಮುಂಜಾನೆಯಿಂದ ಬಿಡುವನ್ನು ನೀಡಿದ್ದರೂ ಕೂಡಾ ಬುಧವಾರ ಮುಂಜಾನೆ ಹಿರಣ್ಯಕೇಶಿ, ಮಾರ್ಕಂಡೇಯ, ಬಳ್ಳಾರಿ ನಾಲಾದಿಂದ ಘಟಪ್ರಭಾ ನದಿಗೆ ಸುಮಾರು 67 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವುದಿರಂದ ನೀರಿನ ಮಟ್ಟ ಕಡಿಮೆಯಾಗಿದೆ.

ಅಲ್ಲದೇ ಸಂಜೆ ವೇಳೆಗೆ ನೀರಾವರಿ ಇಲಾಖೆಯ ಮಾಹಿತಿ ಪ್ರಕಾರ 68 ಸಾವಿರ ಕ್ಯೂಸೆಕ್ಸ ನದಿಗೆ ಹರಿದು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿರುವುದರಿಂದ ಆತಂಕವನ್ನು ದೂರು ಮಾಡಿದೆ. ನಿನ್ನೆ ರಾತ್ರಿ ಚಿಕ್ಕೋಳಿ ಸೇತುವೆ ಮೇಲೆ ಇದ್ದು ನೀರು ಇಂದು ಇಳಿಕೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

ಗೋಕಾಕ್ ನಗರದ ಉಪ್ಪಾರ ಗಲ್ಲಿ, ಕುಂಬಾರ ಗಲ್ಲಿ, ಹಾಳಬಾಗ ಗಲ್ಲಿ, ಹಳೆಯ ದನದ ಪೇಠೆ, ಮಟನ್ ಮಾರ್ಕೆಟ್, ದಾಳಂಬರಿ ತೋಟ ಸೇರಿದಂತೆ ಅನೇಕ ಗಲ್ಲಿಗಳಲ್ಲಿ ನೀರು ನುಗ್ಗಿತ್ತು, ನಿನ್ನೆಯ ದಿನಕ್ಕೆ ನೀರಿನ ಮಟ್ಟವನ್ನು ಅವಲೋಕಿಸಿದಾಗ ಇಂದು ಎಲ್ಲ ಗಲ್ಲಿಗಳಲ್ಲಿ ಸುಮಾರು 100 ಅಡಿಗಳಷ್ಟು ದೂರ ನೀರು ಸರಿದಿದೆ. ಅದೇ ರೀತಿಯಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡಾ ನೀರು ಕಡಿಮೆಯಾಗಿದೆ ಇದರಿಂದ ಸಂತ್ರಸ್ಥರಲ್ಲಿ ಸಂತೋಷವನ್ನುಂಟು ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications