ಬೆಳಗಾವಿ ಕೆಎಟಿ ಪೀಠ ತಾತ್ಕಾಲಿಕವಾಗಿ ಬಂದ್
ಬೆಳಗಾವಿ, ಜನವರಿ 20 : ಆರಂಭವಾದ ಒಂದು ತಿಂಗಳಿನಲ್ಲಿಯೇ ಬೆಳಗಾವಿ ಕೆಎಟಿ ಪೀಠ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಬೆಳಗಾವಿ ಕೆಎಟಿ ಪೀಠದ ವ್ಯಾಪ್ತಿಗೆ 7 ಜಿಲ್ಲೆಗಳು ಸೇರಿವೆ.
2019ರ ಜನವರಿ 16ರಿಂದ ಬೆಳಗಾವಿಯ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಪೀಠ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. 2018ರ ಡಿಸೆಂಬರ್ 17ರಂದು ಬೆಳಗಾವಿಯ ಕೆಎಟಿ ಪೀಠವನ್ನು ಉದ್ಘಾಟನೆ ಮಾಡಲಾಗಿತ್ತು.
ಬೆಳಗಾವಿ ಕೆಎಟಿ ಪೀಠಕ್ಕೆ ಪ್ರಧಾನ ಪೀಠದಿಂದ 150 ಪ್ರಕರಣಗಳನ್ನು ವರ್ಗಾವಣೆ ಮಾಡಲಾಗಿತ್ತು. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಮತ್ತು ನ್ಯಾಯಾಂಗ ಸದಸ್ಯ ವಿ.ಪಿ.ಬಳಿಗಾರ್ ಅವರು ಜನವರಿ 7 ರಿಂದ ಪೀಠದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಕರ್ನಾಟಕ ಸರ್ಕಾರ ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕೆಎಟಿ ಪೀಠ ಸ್ಥಾಪನೆ ಮಾಡಲು 2015ರಲ್ಲಿ ನಿರ್ಧಾರವನ್ನು ಕೈಗೊಂಡಿತ್ತು. 2018ರಲ್ಲಿ ಪೀಠವನ್ನು ಉದ್ಘಾಟನೆ ಮಾಡಲಾಗಿತ್ತು.
ಬೆಳಗಾವಿ ಕೆಎಟಿ ಪೀಠದ ವ್ಯಾಪ್ತಿಗೆ ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಒಳಪಡುತ್ತವೆ. ಈ ಜಿಲ್ಲೆಗಳ ಸುಮಾರು 2644 ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ.
ಕೆಎಟಿ ರಿಜಿಸ್ಟ್ರಾರ್ ಕೆ.ಅಮರನಾರಾಯಣ ಅವರು ಈ ಕುರಿತು ಮಾಹಿತಿ ನೀಡಿದ್ದು, '2019ರ ಜನವರಿ 16ರಿಂದ ಪೀಠ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ. ಶೀಘ್ರದಲ್ಲೇ ಪೀಠವು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ' ಎಂದು ಹೇಳಿದ್ದಾರೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ










Click it and Unblock the Notifications