ಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟ
ಬೆಳಗಾವಿ, ನವೆಂಬರ್ 5 : ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವ ವಿಚಾರದಲ್ಲಿ ಬೆಳಗಾವಿಯಲ್ಲಿ ಕಲ್ಲು ತೂರಾಟ ನಡೆದಿದೆ. ಖಡಕ್ಗಲ್ಲಿಯಲ್ಲಿ ಶನಿವಾರ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶನಿವಾರ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಮುಸ್ಲಿಂ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದರು.
ಇದೇ ವಿಚಾರವಾಗಿ ರಾತ್ರಿ ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆದಿದೆ. ಕೆಲವು ಕಿಡಿಗೇಡಿಗಳು ಗಲ್ಲಿಯತ್ತ ಬಾಟಲಿ ಎಸೆದರು. ಸ್ಥಳಕ್ಕೆ ತಕ್ಷಣ ಪೊಲೀಸರು ಆಗಮಿಸಿದರು. ಪೊಲೀಸರ ಮುಂದೆಯೇ ಕಲ್ಲು ತೂರಾಟ ನಡೆದಿದ್ದು, ಪೊಲೀಸರ ವಾಹನವೂ ಜಖಂಗೊಂಡಿದೆ.
ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರಕತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಪ್ರತಿಕೃತಿ ದಹಿಸಲು ಯತ್ನ
ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಬಂದ ಮುಸ್ಲಿಂ ಸಮುದಾಯದ ಮುಖಂಡರು ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದರು. ಇದೇ ವಿಚಾರದಲ್ಲಿ ಕಲ್ಲು ತೂರಾಟ ನಡೆದಿದೆ.

ಬಾಟಲಿಗಳನ್ನು ಎಸೆದರು
ಖಡಕ್ ಗಲ್ಲಿ ಬೆಳಗಾವಿ ನಗರದ ಸೂಕ್ಷ್ಮ ಪ್ರದೇಶ. ಹಲವು ಬಾರಿ ಇಲ್ಲಿ ಕಲ್ಲು ತೂರಾಟಗಳು ನಡೆದಿವೆ. ಶನಿವಾರ ಮೊದಲು ಬಾಟಲಿಗಳನ್ನು ಎಸೆಯಲಾಯಿತು. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆಗ ಪೊಲೀಸರ ಸಮ್ಮುಖದಲ್ಲಿಯೇ ಕಲ್ಲು ತೂರಾಟ ನಡೆದಿದೆ.

ಟಿಪ್ಪು ಜಯಂತಿ ಆಚಣೆಗೆ ಸೇನೆ ವಿರೋಧ
ಶ್ರೀರಾಮ ಸೇನೆ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದೆ. 'ಮತಾಂಧನಾಗಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು' ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ ಎಚ್ಚರಿಕೆ ನೀಡಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್
ಕಲ್ಲು ತೂರಾಟದ ಘಟನೆ ಏಕೆ ನಡೆಯಿತು? ಎಂದು ಪೊಲೀಸರು ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರಕತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications