ಅಂದು ಅನಂತ್ ಕುಮಾರ್ ಪತ್ನಿಗೆ ಒಂದು ನ್ಯಾಯ, ಇಂದು ಸುರೇಶ್ ಅಂಗಡಿ ಪತ್ನಿಗೆ ಇನ್ನೊಂದು ನ್ಯಾಯ!
ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ದಿವಂಗತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅವರಿಗೆ ಟಿಕೆಟ್ ಲಭಿಸಿದೆ.
ಬೆಳಗಾವಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದರೂ, ಪ್ರತಿಸ್ಪರ್ಧಿ ಸತೀಶ್ ಜಾರಕಿಹೊಳಿ ಆಗುವ ಸಾಧ್ಯತೆಯಿರುವುದರಿಂದ, ಬಿಜೆಪಿ ಅಳೆದು ತೂಗಿ ಅಂಗಡಿ ಪತ್ನಿಗೆ ಟಿಕೆಟ್ ನೀಡಿದೆ.
ಸುರೇಶ್ ಅಂಗಡಿ ಕುಟುಂಬದ ಸದಸ್ಯರೊಬ್ಬರಿಗೆಯೇ ಟಿಕೆಟ್ ಲಭಿಸುವುದು ಪಕ್ಕಾ ಆಗಿದ್ದರೂ, ಅದು ಅವರ ಪುತ್ರಿ ಮತ್ತು ಸಚಿವ ಜಗದೀಶ್ ಶೆಟ್ಟರ್ ಸೊಸೆಯೂ ಆಗಿರುವ ಶ್ರದ್ದಾ ಶೆಟ್ಟರ್ಗೆ ಟಿಕೆಟ್ ಬಹುತೇಕ ಕನ್ಫರ್ಮ್ ಎನ್ನುವ ಮಾತು ಚಾಲ್ತಿಯಲ್ಲಿತ್ತು.
ಸತೀಶ್ ಜಾರಕಿಹೊಳಿ ಸ್ಪರ್ಧೆಯಿಂದಾಗಿ ಬಿಜೆಪಿ ಈಗ ಅನುಕಂಪದ ಬೆನ್ನೇರಿ ಅಂಗಡಿ ಪತ್ನಿಗೆ ನೀಡಿದೆ ಮತ್ತು ಕುಟುಂಬ ರಾಜಕಾರಣದ ಮೊರೆ ಹೋಗಿದೆ. ಆದರೆ, ಬಿಜೆಪಿಯು ಈ ಹಿಂದೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾಡಿದ್ದೇನು ಎನ್ನುವ ಚರ್ಚೆ ಈಗ ಆರಂಭವಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶ್ರದ್ದಾ ಶೆಟ್ಟರ್ ಹೆಸರು ಮಂಚೂಣಿಯಲ್ಲಿತ್ತು
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶ್ರದ್ದಾ ಶೆಟ್ಟರ್, ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿಯವರ ಹೆಸರು ಕೇಳಿ ಬರುತ್ತಿತ್ತು. ಆದರೆ, ಎಲ್ಲೂ ಅಂಗಡಿಯವರ ಪತ್ನಿ ಹೆಸರು ಕೇಳಿ ಬರುತ್ತಿರಲಿಲ್ಲ. ಸುರೇಶ್ ಅಂಗಡಿ ಎಜುಕೇಶನ್ ಫೌಂಡೇಶನ್ ಚೇರ್ಮನ್ ಆಗಿ ಕೆಲಸ ನಿರ್ವಹಿಸುತ್ತಿರುವ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ತನ್ನ ಹಿಂದಿನ ಮಾತಿನಂತೆ ನಡೆದುಕೊಳ್ಳಲಿಲ್ಲ.

ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ
ಕಳೆದ ಸಾರ್ವತ್ರಿಕ ಚುನಾವಣೆಯ ವೇಳೆ ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ದಿವಂಗತ ಅನಂತ್ ಕುಮಾರ್ ಅವರ ಪತ್ನಿ, ಅದಮ್ಯ ಚೇತನ ಫೌಂಡೇಶನ್ನ ತೇಜಸ್ವಿನಿ ಅವರ ಹೆಸರು ಕೇಳಿ ಬರುತ್ತಿತ್ತು. ನಾಮಪತ್ರ ಸಲ್ಲಿಸಲು ಕೊನೆಯ ದಿನದ ಮುನ್ನಾದಿನ ರಾತ್ರಿ ಬಿಜೆಪಿ ವರಿಷ್ಠರು ತೇಜಸ್ವಿ ಸೂರ್ಯಗೆ ಟಿಕೆಟ್ ಘೋಷಿಸಿದ್ದರು.

ಬೆಳಗಾವಿ ಉಪಚುನಾವಣೆ: ಅನುಕಂಪದ ಬೆನ್ನೇರಿದ ಬಿಜೆಪಿ
ತೇಜಸ್ವಿನಿ ಅನಂತ್ ಕುಮಾರ್ಗೆ ಟಿಕೆಟ್ ನೀಡದೇ ಇದ್ದದ್ದು ಆವೇಳೆ ವ್ಯಾಪಕ ಚರ್ಚೆ/ಟೀಕೆಗೆ ಗುರಿಯಾಗಿತ್ತು. ಆ ವೇಳೆ, ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಆಸ್ಪದವಿಲ್ಲ ಎನ್ನುವ ಸ್ಪಷ್ಟನೆಯನ್ನು ಬಿಜೆಪಿ ವರಿಷ್ಠರು ನೀಡಿದ್ದರು. ಈಗ ಬೆಳಗಾವಿ ಉಪಚುನಾವಣೆಗೆ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದೆ. ಆ ಮೂಲಕ, ಕುಟುಂಬ ರಾಜಕಾರಣ ಬಿಜೆಪಿಯಲ್ಲಿ ಇಲ್ಲ ಎನ್ನುವ ಮಾತಿಗೆ ಚ್ಯುತಿ ಬಂದಂತಾಗಿದೆ.

ಅಮಿತ್ ಶಾ ಬೆಳಗಾವಿಗೆ ಭೇಟಿ ನೀಡಿದ್ದ ವೇಳೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಭೇಟಿ ನೀಡಿದ್ದ ವೇಳೆ, ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದರು. ಆದರೂ ತಮ್ಮ ಸೊಸೆ (ಸುರೇಶ ಅಂಗಡಿ ಪುತ್ರಿ) ಶ್ರದ್ಧಾ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸಲು ಜಗದೀಶ್ ಶೆಟ್ಟರ್ ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಒಂದು ವೇಳೆ ಸತೀಶ್ ಜಾರಕಿಹೊಳಿ ಸ್ಪರ್ಧಿಸದೇ ಇದ್ದಿದ್ದರೆ, ಬಹುಷಃ ಬಿಜೆಪಿ ಬೇರೆಯವರಿಗೆ ಮಣೆಹಾಕುತ್ತಿತ್ತೋ ಏನೋ?
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications