ಚಳಿಗಾಲದ ಅಧಿವೇಶನದ ವೇಳೆ ಸರ್ಕಾರಕ್ಕೆ ಚಳಿ ಬಿಡಿಸಲು ಮಾದಿಗರು ಸಜ್ಜು
ಬೆಳಗಾವಿ, ನವೆಂಬರ್ 11: ನ್ಯಾ. ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಚಲೋ ಬೆಳಗಾವಿ ಹೋರಾಟವನ್ನು ಮಾದಿಗ ಡಂಡೋರ ಸಮುದಾಯ ಹಮ್ಮಿಕೊಂಡಿದೆ.
ಬೆಳಗಾವಿಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಸ್ತುವಾರಿ ಕೊಳ್ಳ ವೆಂಕಟೇಶ್, ಸಮಿತಿ ಸದಸ್ಯ ದೇವರಾಜ ಅವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರ ನೀಡಿದರು.
ನವೆಂಬರ್ 15 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಮಾದಿಗರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಮುಂದುವರೆಸಲಾಗಿದೆ.

ರಾಜ್ಯದ ವಿವಿಧೆಡೆಗಳಿಂದ ಸುಮಾರು ಒಂದು ಲಕ್ಷ ಮಾದಿಗರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಚಳಿಗಾಲ ಅಧಿವೇಶನದಲ್ಲಿ ಸದಾಶಿವ ವರದಿ ಅಂಗೀಕಾರಕ್ಕೆ ಆಗ್ರಹಿಸಲಾಗುವುದು ಎಂದು ದೇವರಾಜ ಅವರು ಹೇಳಿದರು.
ನ್ಯಾಯಮೂರ್ತಿ ಸದಾಶಿವ ಆಯೋಗ : ಆಯೋಗ ತನ್ನ ವರದಿಯಲ್ಲಿ 96 ಲಕ್ಷ ಪರಿಶಿಷ್ಟರಲ್ಲಿ ಶೇ 33.74 ಎಡಗೈನವರು, ಶೇ 32ರಷ್ಟು ಬಲಗೈನವರು ಶೇ 23.64 ಸ್ಪರ್ಶಜಾತಿಗಳಾಗಿ ಶೇ 4.64 ಇತರ ಪರಿಶಿಷ್ಟ ಜಾತಿಯವರು ಎನ್ನುವ ಅಂಕಿ-ಅಂಶ ನೀಡಿದೆ.
ಮೀಸಲಾತಿಯ ಮರುವರ್ಗಿಕರಣಕ್ಕೆ ಶಿಫಾರಸು ಮಾಡಿದ್ದು ಇದು ದಲಿತರಲ್ಲಿಯೆ ಒಡಕಿಗೆ ಕಾರಣವಾಗಿದೆ. ರಾಜ್ಯದಲ್ಲಿನ ಒಟ್ಟು 101 ಜಾತಿಗಳ ದಲಿತ ಸಮುದಾಯವನ್ನು ನಾಲ್ಕು ವರ್ಗಗಳಾಗಿ ವಿಭಜಿಸಿ ಶೇ 15ರಷ್ಟಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೆ ತರುವಂತೆ ಶಿಫಾರಸು ಮಾಡಿದೆ. ಇದರಲ್ಲಿ ಎಡಗೈಗೆ ಶೇ 6, ಬಲಗೈಗೆ ಶೇ 5, ಸ್ಪರ್ಶರಿಗೆ ಶೇ 3 ಹಾಗೂ ಇತರರಿಗೆ ಶೇ 1 ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದೆ.
ವರದಿಯನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಒಳಮೀಸಲಾತಿ ಅನುಷ್ಠಾನಕ್ಕೆ ತರಬೇಕಾದರೆ ವರದಿಯನ್ನು ಆಧಾರಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರ್ಗಿಕರಣದ ಅನುಮೋದನೆಗಾಗಿ ಕಳಿಸಿಕೊಡಬೇಕಾಗುತ್ತೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications