ಚಳಿಗಾಲದ ಅಧಿವೇಶನದ ವೇಳೆ ಸರ್ಕಾರಕ್ಕೆ ಚಳಿ ಬಿಡಿಸಲು ಮಾದಿಗರು ಸಜ್ಜು
ಬೆಳಗಾವಿ, ನವೆಂಬರ್ 11: ನ್ಯಾ. ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಚಲೋ ಬೆಳಗಾವಿ ಹೋರಾಟವನ್ನು ಮಾದಿಗ ಡಂಡೋರ ಸಮುದಾಯ ಹಮ್ಮಿಕೊಂಡಿದೆ.
ಬೆಳಗಾವಿಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಸ್ತುವಾರಿ ಕೊಳ್ಳ ವೆಂಕಟೇಶ್, ಸಮಿತಿ ಸದಸ್ಯ ದೇವರಾಜ ಅವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರ ನೀಡಿದರು.
ನವೆಂಬರ್ 15 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಮಾದಿಗರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಮುಂದುವರೆಸಲಾಗಿದೆ.

ರಾಜ್ಯದ ವಿವಿಧೆಡೆಗಳಿಂದ ಸುಮಾರು ಒಂದು ಲಕ್ಷ ಮಾದಿಗರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಚಳಿಗಾಲ ಅಧಿವೇಶನದಲ್ಲಿ ಸದಾಶಿವ ವರದಿ ಅಂಗೀಕಾರಕ್ಕೆ ಆಗ್ರಹಿಸಲಾಗುವುದು ಎಂದು ದೇವರಾಜ ಅವರು ಹೇಳಿದರು.
ನ್ಯಾಯಮೂರ್ತಿ ಸದಾಶಿವ ಆಯೋಗ : ಆಯೋಗ ತನ್ನ ವರದಿಯಲ್ಲಿ 96 ಲಕ್ಷ ಪರಿಶಿಷ್ಟರಲ್ಲಿ ಶೇ 33.74 ಎಡಗೈನವರು, ಶೇ 32ರಷ್ಟು ಬಲಗೈನವರು ಶೇ 23.64 ಸ್ಪರ್ಶಜಾತಿಗಳಾಗಿ ಶೇ 4.64 ಇತರ ಪರಿಶಿಷ್ಟ ಜಾತಿಯವರು ಎನ್ನುವ ಅಂಕಿ-ಅಂಶ ನೀಡಿದೆ.
ಮೀಸಲಾತಿಯ ಮರುವರ್ಗಿಕರಣಕ್ಕೆ ಶಿಫಾರಸು ಮಾಡಿದ್ದು ಇದು ದಲಿತರಲ್ಲಿಯೆ ಒಡಕಿಗೆ ಕಾರಣವಾಗಿದೆ. ರಾಜ್ಯದಲ್ಲಿನ ಒಟ್ಟು 101 ಜಾತಿಗಳ ದಲಿತ ಸಮುದಾಯವನ್ನು ನಾಲ್ಕು ವರ್ಗಗಳಾಗಿ ವಿಭಜಿಸಿ ಶೇ 15ರಷ್ಟಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೆ ತರುವಂತೆ ಶಿಫಾರಸು ಮಾಡಿದೆ. ಇದರಲ್ಲಿ ಎಡಗೈಗೆ ಶೇ 6, ಬಲಗೈಗೆ ಶೇ 5, ಸ್ಪರ್ಶರಿಗೆ ಶೇ 3 ಹಾಗೂ ಇತರರಿಗೆ ಶೇ 1 ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದೆ.
ವರದಿಯನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಒಳಮೀಸಲಾತಿ ಅನುಷ್ಠಾನಕ್ಕೆ ತರಬೇಕಾದರೆ ವರದಿಯನ್ನು ಆಧಾರಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರ್ಗಿಕರಣದ ಅನುಮೋದನೆಗಾಗಿ ಕಳಿಸಿಕೊಡಬೇಕಾಗುತ್ತೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications