ತೀವ್ರ ಕುತೂಹಲ: ಶಾಸಕ ಯತ್ನಾಳ್ ಪರ ಪ್ರಭಾವಿ ಸಚಿವರ ಬ್ಯಾಟಿಂಗ್
ಬೆಳಗಾವಿ, ಫೆಬ್ರವರಿ 13: ಸಿಎಂ ಯಡಿಯೂರಪ್ಪ ಹಾಗೂ ಅವರ ನಾಯಕತ್ವದ ವಿರುದ್ಧ ಪದೇ ಪದೇ ಧ್ವನಿ ಎತ್ತುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ.
ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬೆಳಗಾವಿಯ ಪ್ರಭಾವಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿಯಲ್ಲಿ ಶನಿವಾರ ಉಭಯ ಸಚಿವರು ಮಾತನಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಯತ್ನಾಳ್ ನನ್ನ ಸ್ನೇಹಿತ, ತಿಳಿಸಿ ಹೇಳುತ್ತೇವೆ. ಸಮಾಜದ ಬಗ್ಗೆ ಮಾತನಾಡೋದು ತಪ್ಪಲ್ಲ, ಇತಿಮಿತಿಯಲ್ಲಿ ಮಾತನಾಡಿ ಅಂತಾ ಮನವಿ ಮಾಡುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ಅವನು ಸೀನಿಯರ್ ಇದ್ದಾರೆ, ಪ್ರಮುಖ ಸಮಾಜದ ಶಾಸಕರಾಗಿದ್ದಾರೆ. ಯತ್ನಾಳ್ ಒಳ್ಳೆಯ ಮಿತ್ರ, ಮುಂದೆ ಒಳ್ಳೆಯ ಭವಿಷ್ಯ ಇದೆ. ಸಮಾಜಕ್ಕಾಗಿ ಹೋರಾಟ ಮಾಡಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿರುವುದು ಬಿಜೆಪಿಯಲ್ಲಿ ಅಚ್ಚರಿಗೆ ಕಾರಣವಾಗಿದೆ.
ಇನ್ನು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಉಮೇಶ ಕತ್ತಿ ಕೂಡಾ ವಿಜಯಪುರ ಶಾಸಕ ಯತ್ನಾಳ್ ಪರವಾಗಿ ಮಾತನಾಡಿದರು. ರಮೇಶ್ ಜಾರಕಿಹೊಳಿ, ಯತ್ನಾಳ್ ನಾವೆಲ್ಲಾ ಸ್ನೇಹಿತರು.

ಪಕ್ಷ ನೀಡಿರುವ ಶೋಕಾಸ್ ನೋಟಿಸ್ ಗೆ ಲವ್ ಲೆಟರ್ ಎಂದ ಸಚಿವ ಉಮೇಶ್ ಕತ್ತಿ, ನೋಟೀಸ್ ಬರುತ್ತವೆ. ಲವ್ ಲೆಟರ್ ಬೇಡ ಅಂದ್ರೂ ಬರ್ತಿರುತ್ತವೆ ಎಂದರು. ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷ ವಿರೋಧಿ ಮಾಡುತ್ತಿಲ್ಲ ಎಂದು ಸಮರ್ಥಿಸಿಕೊಂಡರು.
ಮಂತ್ರಿಯಾಗಿದ್ದರೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದಾಗ ಪ್ರತಿಭಟನೆ ಮಾಡುತ್ತೇನೆ. ಅನ್ಯಾಯವಾದಾಗ ನಾನು ಪ್ರತಿಭಟನೆ ಮಾಡುವುದನ್ನು ಬಿಡಲ್ಲ. ಊಟ ಮಾಡಲು ಎನೂ ಬೇಕು ಅದನ್ನ ನಮ್ಮ ಸರ್ಕಾರ ಮಾಡಿದೆ. ಅಕ್ಕಿ ಕಡಿತ ಮಾಡಿಲ್ಲ, ಅಕ್ಕಿ ಜೊತೆಗೆ ಜೋಳ, ರಾಗಿ ಕೊಡುತ್ತಿದ್ದೇವೆ.ಜನರು ಪ್ರತಿಭಟನೆ ಮಾಡಿದರೆ, ಬೇಡ ಅಂದ್ರೆ ಮತ್ತೆ ಅಕ್ಕಿ ಕೊಡುತ್ತೇವೆ ಎಂದು ಉಮೇಶ್ ಕತ್ತಿ ಹೇಳಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications