ತಾಲೂಕು ರಚನೆಯಾದ ಖುಷಿಯಲ್ಲಿ ಗಾಜಿನ ಚೂರುಗಳ ಮೇಲೆ ಉರುಳು ಸೇವೆ
Recommended Video

ಬೆಳಗಾವಿ, ಅಕ್ಟೋಬರ್ 13: ಮೂಡಲಗಿ ತಾಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಮೂಡಲಗಿ ಯುವಕ ಸುರೇಶ ಬೆಳವಿ ಎಂಬುವರು ಉರುಳು ಸೇವೆ ಮಾಡಿದ್ದಾರೆ. ಅದರೆ, ಸುರೇಶ್ ಉರುಳು ಸೇವೆ ಮಾಡಿದ್ದು ಬರೀ ನೆಲದ ಮೇಲಲ್ಲ. ಒಡೆದ ಗಾಜಿನ ಚೂರುಗಳ ಮೇಲೆ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ.
ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದರೆ, ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುವುದಾಗಿ ಸುರೇಶ ಬೆಳವಿ ಅವರು ಹರಕೆ ಹೊತ್ತಿದ್ದರು.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಟ್ಟಣ ಮೂಡಲಗಿ ನೂತನ ತಾಲೂಕುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿತ್ತು. ಆದರೆ, ಅಧಿಕೃತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡುವಾಗ ಮಾತ್ರ ಮೂಡಲಗಿ ಹೆಸರು ನಾಪತ್ತೆಯಾಗಿತ್ತು.

ಗೋಕಾಕ ತಾಲೂಕಿನಲ್ಲಿ ಅತ್ಯಂತ ದೊಡ್ಡ ಪಟ್ಟಣವಾಗಿರುವ ಮೂಡಲಗಿಯನ್ನು ತಾಲೂಕು ಕೇಂದ್ರವಾಗಿ ರಚಿಸಲು ಸರ್ಕಾರವೇ ನೇಮಕ ಮಾಡಿದ್ದ ಹುಂಡೇಕರ್, ವಾಸುದೇವ ಮತ್ತು ಗದ್ದಿಗೌಡರ್ ಸಮಿತಿ ವರದಿಯಲ್ಲಿ ಶಿಪಾರಸು ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಹೆಸರು ನಾಪತ್ತೆಯಾಗಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಸ್ಥಳೀಯರು ನಿರಂತರವಾಗಿ ಇಲ್ಲಿನ ಕಲ್ಮೇಶ್ವರ ವೃತ್ತದಲ್ಲಿ 'ಮೂಡಲಗಿ ತಾಲೂಕು ಹೋರಾಟ ಸಮಿತಿ' ಹೆಸರಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರು.
ನಂತರ ಎಚ್ಚೆತುಕೊಂಡ ಸರ್ಕಾರವು ಮೂಡಲಗಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಿತು. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮೂಡಲಗಿ ಪಟ್ಟಣವನ್ನು ಹೊಸ ತಾಲೂಕನ್ನಾಗಿ ರಚಿಸಲು ಸಂಪುಟವು ತೀರ್ಮಾನಿಸಿದೆ," ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
2013ರಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ್ ಸರ್ಕಾರ ಘೋಷಿಸಿದ 43 ತಾಲೂಕುಗಳ ಪೈಕಿ ಇದು ಒಂದಾಗಿತ್ತು. ಆದರೆ, 2017ರಲ್ಲಿ ತಾಲೂಕು ಭಾಗ್ಯ ಸಿಕ್ಕಿದೆ. ಬಿಜಾಪುರದ ಆದಿಲ್ ಷಾಹಿಗಳು, ಸವಣೂರು ನವಾಬರು, ಪೇಶ್ವೆಗಳು, ಕಿತ್ತೂರಿನ ಸಂಸ್ಥಾನ, ಜಮಖಂಡಿ ಸಂಸ್ಥಾನ , ಹಾಗೂ ಬ್ರಿಟಿಷರು ಇಲ್ಲಿ ಆಡಳಿತ ನಡೆಸಿದ್ದಾರೆ.ಸುಮಾರು 35 ಸಾವಿರ ಜನಸಂಖ್ಯೆ ಹೊಂದಿದೆ. 21 ವಾರ್ಡಗಳನ್ನು ಹೊಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications