ಮೆರವಣಿಗೆಯಲ್ಲಿ ಪಾಕಿಸ್ತಾನದ ಹಾಡು: ಪ್ರಕರಣ ದಾಖಲಿಸಲು ಒತ್ತಾಯ
ಬೆಳಗಾವಿ, ಡಿಸೆಂಬರ್ 02 : ಪಾಕಿಸ್ತಾನದ ಸೈನ್ಯದಲ್ಲಿ ಹಾಡಲಾಗುವ ಹಾಡನ್ನು ಬೆಳಗಾವಿಯ ಈದ್ ಮಿಲಾದ್ ಆಚರಣೆಯಲ್ಲಿ ಹಾಡಲಾಗಿದೆ ಎಂದು ಬೆಳಗಾವಿ ಬಿಜೆಪಿ ಮಹಾನಗರ ಘಟಕ ಪ್ರಧಾನ ಕಾರ್ಯದರ್ಶಿ ರಾಜೀವ ಟೋಪಣ್ಣವರ್ ಆರೋಪಿಸಿದ್ದಾರೆ.
ಇಂದು (ಡಿಸೆಂಬರ್ 02)ರಂದು ನಗರದಲ್ಲಿ ನಡೆದ ಮುಸ್ಲಿಂರ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ ಸಯನ್ಯದಲ್ಲಿ ಹಾಡಲಾಗುವ ಹಾಡನ್ನು ಹಾಡಿದ್ದು, ಇದು ದೇಶದ್ರೋಹದ ಕಾರ್ಯ ಎಂದು ಅವರು ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಕೆಂದೇ ಶಾಂತಿ ಕದಡುವ ಉಮೇದಿನಿಂದ ಮುಸ್ಲಿಂ ನಾಯಕರು ಹೀಗೆ ಮಾಡಿದ್ದಾರೆ ಅವರಿಗೆ ಜನಪ್ರತಿನಿಧಿಗಳ ಬೆಂಬಲವೂ ಇದೆ ಎಂದು ಅವರು ಆರೋಪ ಮಾಡಿದರು.

ಶತ್ರು ದೇಶದ ಹಾಡಿಗೆ ಬೆಳಗಾವಿ ಪಾಲಿಕೆ ಸದಸ್ಯರಾದ ಮಾತೀನ್ ಶೇಖ್, ಬಂದಿನವಾಜ್ ಬಾಳೆಕುಂದ್ರಿ, ಅಜಿಂ ಪಟವೇಗಾರ ಅವರು ನೃತ್ಯ ಮಾಡುವ ಮೂಲಕ ದೇಶ ದ್ರೋಹಿಗಳಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹಬ್ಬ ಆಚರಿಸಲು ಅಡ್ಡಯಿಲ್ಲ ಆದರೆ ಪಾಕಿಸ್ತಾನದ ಹಾಡು ಇಲ್ಲಿ ಯಾಕೆ, ಪಾಕಿಸ್ತಾನದ ಹಾಡು ಇಷ್ಟವಾದರೆ ಅಲ್ಲಿಗೆ ಹೋಗಲಿ ಇಲ್ಲಿ ಬೇಡ ಎಂದು ಅವರು ಅಬ್ಬರಿಸಿದರು.
ಇಷ್ಟೆಲ್ಲಾ ಆಗುತ್ತಿದ್ದರು ಮೆರವಣಿಗೆಗೆ ಭದ್ರತೆ ಒದಗಿಸಿದ್ದ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೂಡಲೆ ಪಾಕಿಸ್ತಾನ ಹಾಡು ಹಾಡಿದ ಹಾಗೂ ಅವರಿಗೆ ಬೆಂಬಲ ಸೂಚಿಸಿದ ಎಲ್ಲರನ್ನೂ ದೇಶದ್ರೋಹದ ಅಡಿ ಬಂಧಿಸಬೇಕು. ಹಾಗೂ ಕರ್ತವ್ಯ ಮರೆತ ಪೊಲೀಸರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications