ಧರ್ಮಸ್ಥಳ, ಇಸ್ಕಾನ್ನಲ್ಲಿ ಹೊಸ ವರ್ಷಾಚರಣೆಗೆ ಪ್ರಮೋದ್ ಮುತಾಲಿಕ್ ಗರಂ
ಬೆಳಗಾವಿ, ಜನವರಿ 9: ಧರ್ಮಸ್ಥಳ ಹಾಗೂ ಬೆಂಗಳೂರಿನ ಇಸ್ಕಾನ್ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದಕ್ಕೆ ಬೆಳಗಾವಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ ಒಂದು ಹೊಸ ವರ್ಷ ಎಂಬುದು ಅವೈಜ್ಞಾನಿಕವಾಗಿದ್ದು, ಶಾಸ್ತ್ರೋಕ್ತವಾಗಿ ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುತ್ತಾ ಬಂದಿದ್ದೇವೆ. ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಜನವರಿ 1ರಂದು ಹೊಸ ವರ್ಷಾಚರಣೆ ಮಾಡುತ್ತಿರುವುದು ದುರ್ದೈವ ಎಂದು ಹೇಳಿದರು.
ಧರ್ಮಸ್ಥಳದಂತ ಪವಿತ್ರ ಕ್ಷೇತ್ರದಲ್ಲಿ ನ್ಯೂ ಇಯರ್ಗಾಗಿ ಅಲಂಕಾರ ಮಾಡುತ್ತಾರೆ. ನ್ಯೂ ಇಯರ್ಗಾಗಿ ಇನ್ವೈಟ್ ಮಾಡ್ತಾರೆ, ಆಚರಣೆ ಮಾಡ್ತಾರೆ ಇದು ನೋವಿನ ಸಂಗತಿ. ಇಸ್ಕಾನ್ ಕೃಷ್ಣನ ಪವಿತ್ರ ದೇವಸ್ಥಾನ, ಅಲ್ಲಿಯೂ ನ್ಯೂ ಇಯರ್ ಆಚರಣೆ ಮಾಡಿದ್ದಾರೆ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದ ಪ್ರಮೋದ್ ಮುತಾಲಿಕ್ ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಇದನ್ನು ವಾಪಸ್ ಪಡೆಯಬೇಕು, ಇಸ್ಕಾನ್ನವರೂ ಹೊಸ ವರ್ಷಾಚರಣೆಯನ್ನು ವಾಪಸ್ ಪಡೆಯಬೇಕು. ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಹಿಂದೂಗಳು ಆರಾಧನೆ ಮಾಡುವ ದೇವಸ್ಥಾನದಲ್ಲಿ ಕ್ರಿಶ್ಚಿಯನ್ ಆಚರಣೆ ಮಾಡ್ತೀರಾ? ಒಂದೆಡೆ ನಾವು ಮತಾಂತರವನ್ನು ವಿರೋಧ ಮಾಡುತ್ತಿದ್ದೇವೆ. ಮತಾಂತರ ವಿರೋಧಿ ಕಾಯ್ದೆಗಳು ಬರುವ ಪ್ರಕ್ರಿಯೆ ನಡೆಯುತ್ತಿವೆ ಎಂದರು.
ಗೋವಾದಲ್ಲಿ 460 ದೇಗುಲಗಳನ್ನು ಕ್ರಿಶ್ಚಿಯನ್ರು, ಪೋರ್ಚುಗೀಸ್ರು ಒಡೆದಿದ್ದಾರೆ. ಇಂದಿಗೂ ಈ ಬಗ್ಗೆ ದಾಖಲೆಗಳು ಇವೆ. ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ವೇಷಾನೇ ಹಾಕಿಕೊಂಡಿದ್ದಾರೆ. ಇವರಿಗೆ ನಾಚಿಕೆ, ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.
ಹಿಂದೂತ್ವಕ್ಕೆ ಹೋರಾಟ ಮಾಡಿ ನಾವು ಜೈಲು, ಕೇಸ್ ಅಂತಾ ಅನುಭವಿಸುವುದು, ನೀವು ಈ ರೀತಿ ನ್ಯೂ ಇಯರ್ ಅಂತಾ ಮೆರೆಯಾದಾ? ನೀವು ಮತಾಂತರಕ್ಕೆ ಪ್ರೇರಣೆ ಕೊಡುತ್ತಿದೀರಾ, ಇದನ್ನೇ ಪಾದ್ರಿಗಳು ಹಿಡಿದುಕೊಂಡು ಹೋಗುತ್ತಿದ್ದಾರೆ ಬೆಳಗಾವಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications