ಬೆಳಗಾವಿಯನ್ನು 2ನೇ ರಾಜಧಾನಿ ಮಾಡಿದ್ರು, ಸಂವಿಧಾನದ ಮಾನ್ಯತೆ ಸಿಗಲ್ಲ
Recommended Video

ಬೆಳಗಾವಿ, ಡಿಸೆಂಬರ್ 16: ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ 12 ವರ್ಷಗಳ ಹಿಂದಿನ ಕನಸು ನನಸಾಗುವ ಸಮಯ ಈಗ ಬಂದಿದೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 19ರಂದು ಸದನದಲ್ಲಿ ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಬಂದಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗಾಗಲೇ ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಘೋಷಿಸುವ ಸಾಧಕ-ಬಾಧಕಗಳ ಕುರಿತು ಕಾನೂನು ತಜ್ಞರನ್ನು ಸಂಪರ್ಕಿಸಿ ಚರ್ಚಿಸಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಅವರ ಮಾಧ್ಯಮ ಕಾರ್ಯದರ್ಶಿ ಎಚ್ ಬಿ ದಿನೇಶ್ ಹೇಳಿದ್ದಾರೆ.
ಕಾನೂನಿನ ತಜ್ಞರ ಪ್ರಕಾರ, ಎರಡನೇ ರಾಜಧಾನಿಯಾಗಿ ಘೋಷಿಸಿದರೂ ಅದಕ್ಕೆ ಕಾನೂನಿನ ಮಾನ್ಯತೆ ಸಿಗುವುದಿಲ್ಲ. ಸಂವಿಧಾನದಲ್ಲಿ ಈ ರೀತಿ 2ನೇ ರಾಜಧಾನಿ ಘೋಷಣೆ ಮಾಡಲು ಯಾವುದೇ ಆಸ್ಪದವಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಯನ್ನು ಎರಡನೇ ರಾಜಧಾನಿ ಬರೀ ಘೋಷಣೆ
ಕರ್ನಾಟಕ ಸರ್ಕಾರದ ಪಾಲಿಗೆ ಬಿಳಿಯಾನೆಯಂತಾಗಿರುವ ಸುವರ್ಣ ವಿಧಾನಸೌಧಕ್ಕೆ 450 ಕೋಟಿ ರುಗೂ ಅಧಿಕ ಖರ್ಚು ವೆಚ್ಚವಾಗಿದೆ. ಚಳಿಗಾಲದಲ್ಲಿ 10 ದಿನಗಳ ಅಧಿವೇಶನ, ರೈತರ ಪ್ರತಿಭಟನೆ ವರ್ಷದಿಂದ ವರ್ಷಕ್ಕೆ ಪುನರಾವರ್ತನೆಯಾಗುತ್ತಿದೆ. 12 ವರ್ಷಗಳ ಹಿಂದೆ ಬಿಜೆಪಿ-ಜೆಡಿಎಸ್ ಸರ್ಕಾರ ಮೊದಲಿಗೆ ಅಧಿಕಾರಕ್ಕೆ ಬಂದಾಗ, ಎಚ್ ಡಿ ಕುಮಾರಸ್ವಾಮಿ ಅವರು ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವುದಾಗಿ ಘೋಷಿಸಿದ್ದರು.

ಯಾವ ರೀತಿ ಘೋಷಣೆ ಎಂಬ ಕುತೂಹಲವಿದೆ
ಹೀಗಾಗಿ, ಡಿಸೆಂಬರ್ 19ರಂದು ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಎರಡನೇ ರಾಜಧಾನಿಯನ್ನಾಗಿ ಬೆಳಗಾವಿಯನ್ನು ಅಂಗೀಕರಿಸಿದರೂ ಸದನದಲ್ಲಿ ಈ ಬಗ್ಗೆ ಯಾವುದೇ ಮಸೂದೆ ಮಂಡನೆ ಅಥವಾ ಅಧಿಕೃತ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿಲ್ಲ ಎಂದು ತಿಳಿದು ಬಂದಿದೆ.

ಸಚಿವಾಲಯ, ಅಧಿಕಾರ ವರ್ಗದಲ್ಲಿ ಗೊಂದಲ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಕೆಲ ಇಲಾಖೆಗಳ ಕಚೇರಿಯನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸುವ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಪ್ರತಿಕ್ರಿಸಿರುವ ಸಚಿವ ಸಂಪುಟ ಉಪ ಸಮಿತಿ ಮುಖ್ಯಸ್ಥ, ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರು ಬೆಳಗಾವಿಗೆ ಸಚಿವಾಲಯ ಕಟ್ಟಡ ಒದಗಿಸುವ ಬಗ್ಗೆ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಗೊಂದಲವಿದೆ.

ಎರಡು ರಾಜಧಾನಿ ಉದಾಹರಣೆ
ಮಹಾರಾಷ್ಟ್ರಕ್ಕೆ ಮುಂಬೈ, ನಾಗಪುರ(ಅನಧಿಕೃತ) ರಾಜಧಾನಿಯಾಗಿದ್ದರೆ, ಜಮ್ಮು ಮತ್ತು ಕಾಶ್ಮೀರಕ್ಕೆ ಚಳಿಗಾಲದಲ್ಲಿ ಜಮ್ಮು ರಾಜಧಾನಿಯಾಗಿದ್ದರೆ, ಶ್ರೀನಗರವು ಬೇಸಿಗೆ ರಾಜಧಾನಿಯಾಗಿದೆ.
ಆದರೆ, ಮಿಕ್ಕಂತೆ ಒಂದೇ ರಾಜ್ಯಕ್ಕೆ ಎರಡು ರಾಜಧಾನಿಗಳಿಲ್ಲ. ಎರಡು ರಾಜ್ಯಕ್ಕೆ ಒಂದು ನಗರವನ್ನು ರಾಜಧಾನಿಯನ್ನು ಹಂಚಲಾಗಿದೆ. ಪಂಜಾಬ್ ಮತ್ತು ಹರ್ಯಾಣಕ್ಕೆ ಚಂಡೀಗಢ ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಹೈದರಾಬಾದ್ ರಾಜಧಾನಿಯಾಗಿದೆ.-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications