ಮಹಾರಾಷ್ಟ್ರದಲ್ಲಿ ಕೀರ್ತಿ ಪತಾಕೆ ಹಾರಿಸಿದ ಬೆಳಗಾವಿಯ ಹೆಮ್ಮೆಯ ಎಮ್ಮೆ
ಬೆಳಗಾವಿ, ಡಿಸೆಂಬರ್ 14: ಮಂಗಳವಾರ ಡಿಸೆಂಬರ್ 12ರಂದು ಮಹಾರಾಷ್ಟ್ರ ಕೊಲ್ಹಾಪುರ ಜಿಲ್ಲೆಯ ಗಡಿಂಗ್ಲಜ್ ನಗರದಲ್ಲಿ ನಡೆದ ಎಮ್ಮೆಗಳ ಓಟದ ಸ್ಪರ್ದೆಯಲ್ಲಿ, ಕನ್ನಡ ನೆಲದ ಹುಲ್ಲು ಮೇಯ್ದು, ಹಿಡಕಲ್ ಡ್ಯಾಮಿನ ನೀರು ಕುಡಿದು ಸಧೃಡವಾಗಿ ಬೆಳೆದಿದ್ದ ಬೆಳಗಾವಿಯ ಎಮ್ಮೆ ಹೈ ಸ್ಪೀಡ್ ರನ್ ಮಾಡಿ ಮಹಾರಾಷ್ಟ್ರದ ಎಮ್ಮೆಗಳನ್ನು ಸೋಲಿಸಿ ನಂಬರ್ ಒನ್ ಸ್ಥಾನ ಪಡೆದಿದೆ.
ಗಡಿಂಗ್ಲಜ್ ನಗರದಲ್ಲಿ ನಡೆದ ಎಮ್ಮೆಗಳ ಓಟದಲ್ಲಿ ಕೊಲ್ಹಾಪುರ, ಸಾಂಗ್ಲಿ, ಮಿರಜ, ಸತಾರಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಿಂದ ನೂರಾರು ಎಮ್ಮೆಗಳು ಭಾಗವಹಿಸಿದ್ದವು ಇದನ್ನು ನೋಡಲು ಮಹಾರಾಷ್ಟ್ರದ ಮೂಲೆ ಮೂಲೆಗಳಿಂದ ಸಾವಿರಾರು ಜನ ಸೇರಿಕೊಂಡಿದ್ದರು.

ನೂರಾರು ಎಮ್ಮೆಗಳ ಸಾಲಿನಲ್ಲಿ ಬೆಳಗಾವಿಯ ಗಂಡು ಮೆಟ್ಟಿನ ನೆಲದ ಎಮ್ಮೆಯೂ ನಿಂತುಕೊಂಡಿತ್ತು ಆಯೋಜಕರು ಕೆಂಪು ರೂಮಾಲು ತೋರಿಸುವದಷ್ಟೆ ತಡ ಬೆಳಗಾವಿಯ ಈ ಎಮ್ಮೆ ಮಹಾರಾಷ್ಟ್ರದ ಎಮ್ಮೆಗಳನ್ನು ಹಿಂದಕ್ಕೆ ಹಾಕಿ ನಿಗದಿತ ಸಮಯಕ್ಕಿಂತ ಮೊದಲೇ ಗುರಿ ಮುಟ್ಟಿ ಮಹಾರಾಷ್ಡ್ರದ ನೆಲದಲ್ಲಿ ಕರ್ನಾಟಕದ ವಿಜಯದ ಪತಾಕೆ ಹಾರಿಸಿತು.
ಬೆಳಗಾವಿಯ ವಡಗಾಂವ ವಿಷ್ಣು ಗಲ್ಲಿಯ ನಿಖಿಲ್ ಪಾಂಡುರಂಗ ದೇಸಾಯಿ ಅವರು ಸಾಕಿ ಬೆಳೆಸಿದ ಎಮ್ಮೆ ಇದಾಗಿದ್ದು ಮಹಾರಾಷ್ಟ್ರದಲ್ಲಿ ನಡೆದ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಅರ್ಜುನ್ ಶ್ರೀ ಪ್ರಶಸ್ತಿಯನ್ನು ಬಾಚಿಕೊಂಡಿದೆ.
ಸ್ಪರ್ದೆಯಲ್ಲಿ ಸಾಧನೆ ಮಾಡಿದ ಎಮ್ಮೆಗೆ ಏಳು ಚೀಲ ಶೇಂಗಾ ಹಿಂಡಿ ಎಮ್ಮೆ ಸಾಕಿದ ಮಾಲೀಕ ನಿಖಿಲ್ಗೆ ಏಳು ಸಾವಿರ ರೂಪಾಯಿ ಮತ್ತು ಪಾರಿತೋಷಕ ನೀಡಿ ಗೌರವಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಸಾಧನೆ ಮಾಡಿದ ಬೆಳಗಾವಿಯ ಎಮ್ಮೆಗೆ ಬೆಳಗಾವಿ ನಗರದಲ್ಲಿ ಸತ್ಕಾರ ಸನ್ಮಾನ ನಡೆಯುತ್ತಿರುವದು ವಿಶೇಷ..ನಮ್ಮ ಎಮ್ಮೆ ..ನಮ್ಮ ಹೆಮ್ಮೆ...
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications