ನಾಮಪತ್ರ ವಾಪಸ್ ಪಡೆದು ಕಣ್ಣೀರಿಟ್ಟ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ
ಬೆಳಗಾವಿ, ನವೆಂಬರ್ 21: ಉಪಚುನಾವಣೆ ಕಣದಲ್ಲಿದ್ದ ಅಭ್ಯರ್ಥಿ ಪಕ್ಷದ ಒತ್ತಡದಿಂದಾಗಿ ನಾಮಪತ್ರ ವಾಪಸ್ ಪಡೆಯುತ್ತಾ ಕಣ್ಣೀರಿಟ್ಟ ಘಟನೆ ಅಥಣಿಯಲ್ಲಿ ನಡೆಯಿತು.
ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಾಮಪತ್ರವನ್ನು ವಾಪಸ್ ಪಡೆದರು. ನಾಮಪತ್ರ ವಾಪಸ್ ಪಡೆವಾಗ ಅವರು ಕಣ್ಣೀರು ಹಾಕಿದರು.
ಅಳುತ್ತಲೇ ಮಾಧ್ಯಮಗಳ ಮುಂದೆ ಮಾತನಾಡಿದ ಶಹಜಹಾನ್ ಡೊಂಗರಗಾಂವ್, 'ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿ ನಾನಿದ್ದೇನೆ. ಒಂದು ಕಡೆ ಪಕ್ಷ, ಒಂದು ನನ್ನನ್ನು ನಂಬಿದ ಜನ' ಎಂದು ಬಿಕ್ಕಿ-ಬಿಕ್ಕಿ ಅತ್ತರು.

'ನಾಮಪತ್ರ ವಾಪಸ್ ಪಡೆಯುವಂತೆ ನನಗೆ ಬಹಳ ಒತ್ತಡ ಬಂದಿದೆ. ಪಕ್ಷದ ಹಿರಿಯರು ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಕ್ಷೇತ್ರ ಹಾಗೂ ಪಕ್ಷದ ಹಿತದೃಷ್ಠಿಯಿಂದಾಗಿ ನಾನು ನಾಮಪತ್ರ ವಾಪಸ್ ಪಡೆಯುತ್ತಿದ್ದೇನೆ' ಎಂದು ಅವರು ಹೇಳಿದ್ದಾರೆ.
'ನಾನು ಕಾಂಗ್ರೆಸ್ ಅಭ್ಯರ್ಥಿ ಆಗಬೇಕು ಎಂಬುದು ಜನರ ಆಸೆಯಾಗಿತ್ತು, ಹಾಗಾಗಿ ನಾಮಪತ್ರ ಸಲ್ಲಿಸಿದ್ದೆ ಆದರೆ ಕಾಂಗ್ರೆಸ್ ಪಕ್ಷದ ಹಿರಿಯರು ನಾಮಪತ್ರ ವಾಪಸ್ ಪಡೆಯುವಂತೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿರುವ ಕೊಡುಗೆ ದೊಡ್ಡದು, ಪಕ್ಷಕ್ಕೆ ಗೌರವ ನೀಡಿ ನಾಮಪತ್ರ ವಾಪಸ್ ಪಡೆಯುತ್ತಿದ್ದೇನೆ' ಎಂದರು.
ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ 'ಅನರ್ಹ' ಮಹೇಶ್ ಕುಮಟಳ್ಳಿ ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಜಾನನ ಮಂಗಸುಳಿ ಸ್ಪರ್ಧಿಸಿದ್ದಾರೆ. ಜೆಡಿಎಸ್ನಿಂದ ಗುರಪ್ಪ ಶಿವಲಿಂಗ ದಾಸ್ಯಾಳ ಸ್ಪರ್ಧಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications