Get Updates
Get notified of breaking news, exclusive insights, and must-see stories!

ವಿಷಪ್ರಸಾದ ತಿಂದು ಮೃತರಾದವರಿಗೆ ಅಧಿವೇಶನದಲ್ಲಿ ಸಂತಾಪ

ಬೆಳಗಾವಿ, ಡಿಸೆಂಬರ್ 17: ಚಾಮರಾಜನಗರ ಜಿಲ್ಲೆಯ ಸುಡ್ವಾಳ ಗ್ರಾಮದ ಕಿಚ್ಚಗುತ್ತ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿ ಮೃತರಾದವರಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಮೃತರಾದವರಿಗೆ ಇಂದು ಬೆಳಗಾವಿ ಅಧಿವೇಶನದಲ್ಲಿ ಸಂತಾಪ ಸೂಚಕ ನಿರ್ಣಯ ಮಂಡಿಸಲಾಯಿತು.

ಸಂತಾಪ ಸೂಚಕ ನಿರ್ಣಯದ ಬಳಿಕ ಮಾತನಾಡಿದ ಗೃಹ ಮಂತ್ರಿ ಪರಮೇಶ್ವರ್ ಅವರು, ಬಾಗಲಕೋಟೆ ಜಿಲ್ಲೆಯ ಖಾಸಗಿ ಸಕ್ಕರೆ ಕಾರ್ಖಾನೆಯ ಸಂಸ್ಕರಣಾ ಘಟಕದಲ್ಲಿ ಭಾನುವಾರ ನಡೆದ ಸ್ಪೋಟ ಪ್ರಕರಣದಲ್ಲಿ ಮೃತರಾದ ನಾಲ್ವರ ಕುಟುಂಬಗಳಿಗೂ ಕೂಡಾ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂ. ಪರಿಹಾರವನ್ನು ನೀಡಲಿದೆ ಎಂದು ಪ್ರಕಟಿಸಿದರು.

Belgaum session express condolence to people who died in temple tragedy in Chamarajanagar

ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚಗುತ್ ಮಾರಮ್ಮ ದೇವಸ್ಥಾನ ಗೋಪುರದ ಶಿಲಾನ್ಯಾಸ ಸಮಾರಂಭದಲ್ಲಿ ವಿತರಿಸಲಾದ ಪ್ರಸಾದವನ್ನು ಸೇವಿಸಿ ಇಬ್ಬರು ಮಕ್ಕಳೂ ಒಳಗೊಂಡಂತೆ ಒಟ್ಟು ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇನ್ನೂ 108 ಜನರು ಮೈಸೂರು ಭಾಗದ 13 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದರ ಜೊತೆಗೆ ಧೈರ್ಯ ತುಂಬುವ ಕಾರ್ಯವನ್ನು ಸರ್ಕಾರ ಮಾಡಲಿ ಎಂದು ಸಭಾಧ್ಯಕ್ಷ ರಮೇಶ್‌ ಕುಮಾರ್‌ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+