ಕಳೆದ ಅಧಿವೇಶನದಲ್ಲಿ ಮೈತ್ರಿ ಸರ್ಕಾರದಿಂದ ದುಂದು ವೆಚ್ಚ; ಆರ್ ಟಿಐ ಕಾರ್ಯಕರ್ತ ಗಡಾದ್ ಆರೋಪ
ಬೆಳಗಾವಿ, ಅಕ್ಟೋಬರ್ 10: ಮೂರು ದಿನಗಳ ಅಸೆಂಬ್ಲಿ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಈ ನಡುವೆಯೇ ಕಳೆದ ವರ್ಷ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ದೋಸ್ತಿ ಸರ್ಕಾರದಿಂದ ವೃಥಾ ಖರ್ಚು ಮಾಡಲಾಗಿದೆ ಎಂದು ಬೆಳಗಾವಿಯಲ್ಲಿ ಆರ್ ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಆರೋಪ ಮಾಡಿದ್ದಾರೆ.
2018ರ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಮೈತ್ರಿ ಸರ್ಕಾರದಿಂದ ಅನವಶ್ಯಕವಾಗಿ ಹಣ ಪೋಲು ಮಾಡಲಾಗಿದೆ ಎಂದು ಅವರು ದೂರಿದ್ದಾರೆ. ಕಳೆದ ಅಧಿವೇಶನದಲ್ಲಿ 13 ಕೋಟಿ 85 ಲಕ್ಷ ವೆಚ್ಚವಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
10 ದಿನಗಳ ಅಧಿವೇಶನದಲ್ಲಿ ಕೇವಲ 40 ಗಂಟೆ 26 ನಿಮಿಷ ಕಲಾಪ ನಡೆದಿದೆ. ವಸತಿಗಾಗಿ 4 ಕೋಟಿ 42 ಲಕ್ಷ 76 ಸಾವಿರ, ಪೆಂಡಾಲ್ ಗಾಗಿ 2 ಕೋಟಿ 33 ಲಕ್ಷ 70 ಸಾವಿರ, ಊಟ ಉಪಾಹಾರಕ್ಕಾಗಿ 3 ಕೋಟಿ ವೆಚ್ಚವಾಗಿರುವುದಾಗಿ ತಿಳಿಸಿದ್ದಾರೆ.

ಭತ್ಯೆಗಾಗಿ 2 ಕೋಟಿ 61 ಲಕ್ಷ 75 ಸಾವಿರ ಬಳಸಲಾಗಿದ್ದು, ಅಧಿವೇಶನ ಸಂದರ್ಭದಲ್ಲಿ ಶಾಸಕರ ಪ್ರತಿ ದಿನದ ವಾಹನ ಭತ್ಯೆಗೆ 2500 ರೂಪಾಯಿ ಖರ್ಚು ಮಾಡಿರುವುದಾಗಿ ಆರೋಪಿಸಿದ್ದಾರೆ. ಅಧಿವೇಶನಕ್ಕಾಗಿ ಜಿಲ್ಲಾಡಳಿತದಿಂದ ಪ್ರತಿಷ್ಠಿತ ಹೊಟೇಲ್ ಗಳಿಗೆ 4 ಕೋಟಿ 42 ಲಕ್ಷ 76 ಸಾವಿರ ವೆಚ್ಚವಾಗಿದೆ.
ಪೊಲೀಸ್ ಇಲಾಖೆಯಿಂದ 2 ಕೋಟಿ 9 ಲಕ್ಷ ವೆಚ್ಚವಾಗಿದ್ದರೆ, ಭದ್ರತೆಗಾಗಿ ಸಿಸಿ ಟಿವಿ ಕ್ಯಾಮೆರಾ ಬಾಡಿಗೆಗೆ 21 ಲಕ್ಷ 58 ಸಾವಿರ ಖರ್ಚಾಗಿದೆ. ಲೋಕೋಪಯೋಗಿ ಇಲಾಖೆಯಿಂದ 5 ಕೋಟಿ 58 ಲಕ್ಷ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆದರೆ ಇಷ್ಟೆಲ್ಲಾ ಕೋಟಿ ಕೋಟಿ ಖರ್ಚು ಮಾಡಿದರೂ ಜನರ ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ ಎಂದು ಗಡಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಹತ್ತು ದಿವಸಗಳ ಅಧಿವೇಶನಕ್ಕೆ ವೆಚ್ಚವಾದ ಹಣದ ಮೊತ್ತವನ್ನು ಮತ್ತು ಅಧಿವೇಶನದ ಕಾರ್ಯಕಲಾಪ ನಡೆದ ಅವಧಿಯನ್ನು ಗಮನಿಸಿದರೆ ಅಧಿವೇಶನಕ್ಕೆ ಪ್ರತಿ ತಾಸಿಗೆ ಸರಾಸರಿ 3 ಲಕ್ಷ 37ಸಾವಿರ ರೂಗಳು ಖರ್ಚಾಗಿದೆ. ಅಧಿವೇಶನದಲ್ಲಿ ಯಾವುದೇ ಗಂಭೀರ ಚರ್ಚೆಗಳು ನಡೆದು ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಇದ್ದರೂ ಸಾರ್ವಜನಿಕರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಲಾದ ಖಜಾನೆಯಲ್ಲಿನ 13,85,38,155ರೂಗಳನ್ನು ಖರ್ಚು ಮಾಡಲಾಗಿದೆ. ಇದು ಕೇವಲ "ಸಾರ್ವಜನಿಕರ ತೆರಿಗೆ ನುಂಗುವ ಅಧಿವೇಶನ" ಎಂದರೆ ತಪ್ಪಾಗಲಾರದು" ಎಂದು ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications