ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಡೌಟೇ ಇಲ್ಲ: ಸಿಎಂ ವಿಶ್ವಾಸ
ಬೆಲಗಾವಿ, ಏಪ್ರಿಲ್ 7: ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಅವರು, ""ನನಗೆ ಭರವಸೆ ಇದೆ, 3 ಲಕ್ಷ ಅಂತರದಿಂದ ಮಂಗಲ ಸುರೇಶ್ ಅಂಗಡಿ ಗೆಲವು ಸಾಧಿಸುತ್ತಾರೆ'' ಎಂದರು.
ಮಂಗಳವಾರ ತಡರಾತ್ರಿವರೆಗೆ ಶಾಸಕರು, ಪಕ್ಷದ ಮುಖಂಡರು ಹಾಗೂ ಎಲ್ಲ ಸಮಾಜದ ಮುಖಂಡರ ಸಭೆ ನಡೆಸಿದ್ದೇನೆ. ನಮ್ಮ ಅಭ್ಯರ್ಥಿ 3 ಲಕ್ಷ ಮತಗಳ ಅಂತರದ ಗೆಲುವು ದಾಖಲಿಸಲಿದ್ದಾರೆ ಎಂದು ತಿಳಿಸಿದರು.

ದಿ.ಸುರೇಶ್ ಅಂಗಡಿ ಅವರು ಈ ಹಿಂದೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ, ನಮ್ಮ ಅಭಿವೃದ್ಧಿ ಕಾರ್ಯಗಳೇ ಮಂಗಲ ಅವರ ಗೆಲುವಿಗೆ ಶ್ರೀರಕ್ಷೆ ಆಗಲಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಇನ್ನು, ಸಾರಿಗೆ ನೌಕರರ ಮುಷ್ಕರದ ಕುರಿತು ಮಾತನಾಡಿದ ಸಿಎಂ ಯಡಿಯೂರಪ್ಪ, ""9 ಬೇಡಿಕೆಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ. ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಷ್ಕರ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದರು.

ಖಾಸಗಿಯವರು ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆದರೆ ಕ್ರಮ ಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಿಗೂ ಮನವಿ ಮಾಡುವೆ. ಸಾರಿಗೆ ಮುಷ್ಕರ ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ. ಎಸ್ಮಾ ಜಾರಿ ಬಗ್ಗೆ ಚರ್ಚೆ ನಡೆಯುತ್ತಿದೆ, ಪರಿಸ್ಧಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸಾರಿಗೆ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ, ಆಗ ನಾನು ಯಾರ ಜೊತೆಗಾದರೂ ಮಾತನಾಡಲು ಸಿದ್ಧ ಎಂದ ಸಿಎಂ ಬಿಎಸ್ವೈ, ಇದೇ ವೇಳೆ ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications