Get Updates
Get notified of breaking news, exclusive insights, and must-see stories!

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಪೊರೇಟರ್ ಬಂಧನ

ಬೆಳಗಾವಿ, ನವೆಂಬರ್‌ 27: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

ಬೆಳಗಾವಿಯ ಭಾಗ್ಯನಗರ 9ನೇ ಕ್ರಾಸ್‌ನಲ್ಲಿ ಸೆಲ್ ಫೋನ್ ಟವರ್ ಅಳವಡಿಕೆ ವಿಚಾರವಾಗಿ ರಮೇಶ್ ಪಾಟೀಲ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

BJP corporator arrested for assaulting a person

ಸೆಲ್ ಫೋನ್ ಟವರ್ ಅಳವಡಿಕೆಗೆ ವಿಚಾರವಾಗಿ ಆಕ್ಷೇಪಿಸಲು ಸ್ಥಳಕ್ಕೆ ಹೋದಾಗ ಪಾಟೀಲ್ ಮತ್ತು ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಾಟೀಲ್‌ ಆರೋಪಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟೀಲ್ ನೀಡಿದ ದೂರಿನಂತೆ ಜವಾಲ್ಕರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್ ಎನ್ ಸಿದ್ರಾಮಪ್ಪ ತಿಳಿಸಿದ್ದಾರೆ.

ಜಾವಲ್ಕರ್ ಬಂಧನಕ್ಕೆ ಆಗ್ರಹಿಸಿ ಎಂಇಎಸ್ ಕಾರ್ಯಕರ್ತರು ಹಾಗೂ ಇತರರು ಭಾನುವಾರ ಟಿಳಕವಾಡಿ ಪೊಲೀಸ್ ಠಾಣೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ನಗರಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ ಬೆನಕೆ ಅವರು ಜಾವಲ್ಕರ್ ಬಂಧನವನ್ನು ಗೂಂಡಾಗಿರಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಎಂಇಎಸ್ ಕೈಗೊಂಬೆಯಾಗಿ ಪರಿಣಮಿಸಿದೆ. ಎಂಇಎಸ್ ಪ್ರತಿಭಟನೆಯ ನಂತರ, ಜವಾಲ್ಕರ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಿದ ಆಸ್ಪತ್ರೆಯಿಂದಲೇ ಬಂಧಿಸಲಾಯಿತು ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+