ಬಿಜೆಪಿ ನೀಡಿದ್ದ ಆಫರ್ ಬಗ್ಗೆ ಮತದಾರರ ಮುಂದೆ ಬಾಯಿಬಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್
Recommended Video
ಬೆಳಗಾವಿ, ನ 27: ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಅಥಣಿಯ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ವಿರೋಧ ವಾಕ್ ಪ್ರಹಾರ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ನೀಡಿದ್ದ ಆಫರ್ ಬಗ್ಗೆ, ಬಹಿರಂಗ ಸಭೆಯಲ್ಲಿ ಪ್ರಸ್ತಾವಿಸಿದ್ದಾರೆ.
ಕ್ಷೇತ್ರದ ಸಂಕೋನಕೊಟ್ಟಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ಹೆಬ್ಬಾಳ್ಕರ್, "ಕ್ಷೇತ್ರದ ಮತದಾರರು ಈ ಚುನಾವಣೆ ಯಾಕಾಗಿ ಬಂದಿದೆ ಎನ್ನುವುದನ್ನು ಮೊದಲು ಅರ್ಥ ಮಾಡಿಕೊಳ್ಲಬೇಕು" ಎಂದು ಹೇಳಿದ್ದಾರೆ.
"ಸಮ್ಮಿಶ್ರ ಸರಕಾರದ ಬಗ್ಗೆ ಮಾತನಾಡುವ ಕುಮಠಳ್ಳಿಗೆ ನಾಚಿಕೆಯಾಗಬೇಕು" ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳ್ಕರ್, "ಕ್ಷೇತ್ರದ ಅಭಿವೃದ್ದಿಗೆ ಕುಮಠಳ್ಳಿ ರಾಜೀನಾಮೆ ನೀಡಲಿಲ್ಲ, ಅವನ ಅಭಿವೃದ್ದಿಗೆ ರಾಜೀನಾಮೆ ನೀಡಿದ" ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ನನ್ನನ್ನೂ ಬಿಜೆಪಿಗೆ ಸೇರಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದ
ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಕರ್, "ಗೋಕಾಕ್ ಪಟ್ಟಣದ ದೊಡ್ಡವ (ರಮೇಶ್ ಜಾರಕಿಹೊಳಿ) ನನ್ನನ್ನೂ ಬಿಜೆಪಿಗೆ ಸೇರಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದ. ಬಹಳ ಪ್ರಯತ್ನವನ್ನೂ ನಡೆಸಿದ್ದ" ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ಸಿಗೆ ರಾಜೀನಾಮೆಯನ್ನು ನೀಡಿ, ಉಳಿದದ್ದನ್ನು ನಾವು ನೋಡಿಕೊಳ್ಳುತ್ತೇವೆ
"ಒಂದು ದಿನ ಸಭೆಗೆ ನನ್ನನ್ನು ಕರೆದಿದ್ದರು. ಬಿಜೆಪಿಗೆ ಸೇರುವಂತೆ ಆಹ್ವಾನಿಸಿದ್ದರು. ಕಾಂಗ್ರೆಸ್ಸಿಗೆ ರಾಜೀನಾಮೆಯನ್ನು ನೀಡಿ, ಉಳಿದದ್ದನ್ನು ನಾವು ನೋಡಿಕೊಳ್ಳುತ್ತೇವೆ" ಎನ್ನುವ ಆಫರ್ ಅನ್ನು ನನಗೆ ಕೊಡಲಾಯಿತು. "ನಿಮ್ಮ ಸಹವಾಸವೇ ಬೇಡ ಎಂದು ಸಭೆಯಿಂದ ಹೊರಬಂದಿದ್ದೆ" ಎಂದು ಲಕ್ಷ್ಮೀ ಹೆಬ್ಬಾಳ್ಕರ್, ಆ ವೃತ್ತಾಂತವನ್ನು ಮೆಲುಕು ಹಾಕಿಕೊಂಡಿದ್ದಾರೆ.

ಮುಂಬೈನ ಐಷಾರಾಮಿ ಹೊಟೇಲ್ ನಲ್ಲಿ ಮಜಾ ಮಾಡುತ್ತಿದ್ದ
"ನೆರೆ ಪ್ರವಾಹದ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಕುಡಿಯೋಕೆ ನೀರು, ತಿನ್ನೋದಕ್ಕೆ ಕನಿಷ್ಠ ಗಂಜಿ ಕೂಡಾ ಇರಲಿಲ್ಲ. ಈ ಕುಮಠಳ್ಳಿ, ಆ ವೇಳೆ, ಮುಂಬೈನ ಐಷಾರಾಮಿ ಹೊಟೇಲ್ ನಲ್ಲಿ ಮಜಾ ಮಾಡುತ್ತಿದ್ದ. ನಾನು ಮತ್ತು ನನ್ನ ಕುಟುಂಬ, ಸಂತ್ರಸ್ತರ ಪರ ಕೆಲಸ ಮಾಡಿದ್ದೆವು" ಎಂದು ಲಕ್ಷ್ಮೀ ಹೆಬ್ಬಾಳ್ಕರ್, ಕುಮಠಳ್ಳಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕರ್ನಾಟಕ ಪ್ರವಾಹ
"ನೆರೆ ಸಂಭವಿಸಿದಾಗ ನಿನ್ನ ತರಹ ನಾನು ಓಡಿ ಹೋಗಲಿಲ್ಲ, ಜವಾಬ್ದಾರಿಯಿಂದ ನುಣುಚಿಕೊಳ್ಳಲಿಲ್ಲ. ಕಾಂಗ್ರೆಸ್ ಬಿಟ್ಟು ಹೋಗಿದ್ದರು ಪರವಾಗಿರಲಿಲ್ಲ, ಆದರೆ ಜನರ ಕಷ್ಟಗಳೊಂದಗೆ ಇದ್ದಿದ್ದರೆ ಭಲೇ ಎನ್ನುತ್ತಿದ್ದೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದರೆ ನೀನು ಓಡಿ ಹೋಗಿದ್ದರೂ ಜನರು ನಿನ್ನನ್ನು ಕ್ಷಮಿಸುತ್ತಿದ್ದರು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳವಾರ (ನ 26) ವಾಗ್ದಾಳಿ ನಡೆಸಿದ್ದರು.

ಲಕ್ಷ್ಮಣ ಸವದಿ ಎನ್ನುವ ದೊಡ್ಡ ಶಕ್ತಿಯನ್ನು ಸೋಲಿಸಿದ್ದೆವು
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಮಹೇಶ್ ಕುಮಠಳ್ಳಿ ಗೆಲ್ಲಲು ರಾಹುಲ್ ಗಾಂಧಿಯವರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿದ್ದೆವು. ಲಕ್ಷ್ಮಣ ಸವದಿ ಎನ್ನುವ ದೊಡ್ಡ ಶಕ್ತಿಯನ್ನು ಸೋಲಿಸಿದ್ದೆವು. ಈಗ, ಕುಮಠಳ್ಳಿ ಪಕ್ಷಕ್ಕೆ ಮತ್ತು ಕ್ಷೇತ್ರದ ಮತದಾರರಿಗೆ ದ್ರೋಹ ಬಗೆದಿದ್ದಾನೆ" ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲಿ ಹರಿಹಾಯ್ದಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications