ಮತ ಕೇಳಲು ಬಂದ ಬಿಜೆಪಿ ನಾಯಕನನ್ನು ಶೆಡ್ ನಲ್ಲಿ ಲಾಕ್ ಮಾಡಿದ ಜನ
ಬೆಳಗಾವಿ, ನ 27: ಜನರ ತಾಳ್ಮೆ ಕೆಟ್ಟರೆ, ಏನಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆಯಾಗಬಲ್ಲದು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಸಿಟ್ಟು ಇದಾಗಿತ್ತು.
ಅಥಣಿಯ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಪರ, ಪ್ರಚಾರಕ್ಕೆ ಬಂದ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರನ್ನು, ಜನ ಶೆಡ್ ನಲ್ಲಿ ಹಾಕಿದ ಘಟನೆ, ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿದೆ.
ಕ್ಷೇತ್ರದ ಜಂಝರವಾಡ ಗ್ರಾಮಕ್ಕೆ ಪಂಚಾಯತ್ ಸದಸ್ಯ ಸಿದ್ದಪ್ಪ ಮುದಕನ್ನವರ್, ಬಿಜೆಪಿ ಕಾರ್ಯಕರ್ತರೊಂದಿಗೆ ಮತಯಾಚನೆಗೆ ಬಂದಿದ್ದರು. ಈ ವೇಳೆ, ಈ ಘಟನೆ ನಡೆದಿದೆ.

ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡನನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆ ವೇಳೆ, ಬಿಜೆಪಿ ಮುಖಂಡ ನೀಡಿದ ಸಮಜಾಯಿಷಿ ಗ್ರಾಮಸ್ಥರಿಗೆ ತೃಪ್ತಿ ನೀಡಲಿಲ್ಲ.
ಸಿಟ್ಟಾದ ಗ್ರಾಮಸ್ಥರು, ಬಿಜೆಪಿ ಮುಖಂಡ ಮುದಕನ್ನವರ್ ಮತ್ತು ಅವರ ಜೊತೆಗೆ ಬಂದ ಕೆಲವರನ್ನು ಶೆಡ್ ನಲ್ಲಿ ಕೂಡಿಹಾಕಿದ್ದಾರೆ. ಸುಮಾರು ಒಂದು ಗಂಟೆಯ ನಂತರ ಅವರನ್ನು ಶೆಡ್ ನಿಂದ ಹೊರಬಿಡಲಾಗಿದೆ.
ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ, ಮತದಾರರ ಆಕ್ರೋಶ ಅಲ್ಲಲ್ಲಿ ಎದುರಾಗುತ್ತಿದೆ. ಯಲ್ಲಾಪುರ ಅಭ್ಯರ್ಥಿ ಶಿವರಾಂ ಹೆಬ್ಬಾರ್, ಹುಣಸೂರು ಅಭ್ಯರ್ಥಿ ಎಚ್.ವಿಶ್ವನಾಥ್, ಕೂಡಾ, ಪ್ರತಿಭಟನೆ ಬಿಸಿಯನ್ನು ಎದುರಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications