ಅಕ್ಕ ಇವತ್ತು ಒಂದು ಪೆಗ್ ಹೆಚ್ಚು ಕುಡಿಯಬೇಕಾಗುತ್ತದೆ: ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ನಾಯಕರ ಪರಮನೀಚ ಹೇಳಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ನಾಯಕ ಪರಮನೀಚ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್ ಅವರು ತಮ್ಮ ಭಾಷಣದಲ್ಲಿ ನಾಲಿಗೆ ಹರಿಬಿಟ್ಟಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ ಗ್ರಾಮೀಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಿಗುತ್ತಿರುವ ಬೆಂಬಲ ನೋಡಿದರೆ 'ಅಕ್ಕ' ನಿದ್ದೆಗೆಡುತ್ತಾರೆ. ಅವರು ನಿದ್ದೆ ಮಾಡಲು ಮಾತ್ರೆ ತೆಗೆದುಕೊಳ್ಳಬೇಕು ಅಥವಾ ಒಂದು 'ಪೆಗ್' ಹೆಚ್ಚಾಗಿ ಕುಡಿಯಬೇಕು ಎಂದು ಸಂಜಯ ಪಾಟೀಲ್ ಹೇಳಿದ್ದಾರೆ. ಭಾಷಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರು ಹೇಳದೇ ಇದ್ದರೂ, ಮೂದಲಿಸಿದ್ದು ಮಾತ್ರ ಅವರನ್ನೇ ಎಂದು ಅರ್ಥವಾಗಗುತ್ತದೆ.

ಶನಿವಾರ ಹಿಂಡಲಗಾದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುವ ಸಂದರ್ಭದಲ್ಲಿ ಸಂಜಯ ಪಾಟೀಲ ಅವರು ಈ ಹೇಳಿಕೆ ನೀಡಿದ್ದಾರೆ.
ತಮ್ಮ ಭಾಷಣದ ವೇಳೆ, ಅಕ್ಕನ ಕ್ಷೇತ್ರದಲ್ಲಿ ಬಿಜೆಪಿ ಸಮಾವೇಶಕ್ಕೆ ಅಪಾರ ಸಂಖ್ಯೆಯ ಮಹಿಳೆಯರು ಸೇರಿರುವುದು ನೋಡಿದರೆ, ಅಕ್ಕ ನಿದ್ದೆಗೆಡುವುದು ಗ್ಯಾರಂಟಿ ಎಂದು ಸಂಜಯ್ ಪಾಟೀಲ್ ಹೇಳಿದರು.
ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಸಂಜಯ್ ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, "ಬಿಜೆಪಿ ನಾಯಕರಿಗೆ ಮಹಿಳೆಯರು, ಮಹಿಳಾ ಕುಲದ ಮೇಲೆ ಇರುವ ಗೌರವ ಎಷ್ಟು ಎನ್ನುವುದನ್ನು ಅವರ ಈ ಹೇಳಿಕೆ ತೋರಿಸುತ್ತದೆ. ಮಹಿಳಾ ಕುಲಕ್ಕೆ ಬಿಜೆಪಿ ನೀಡುವ ಗೌರವ ಇದೇನಾ? ಎಂದು ತಿರುಗೇಟು ನೀಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications