ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಸುರೇಶ ಅಂಗಡಿ ಪತ್ನಿಯ ಅವಿರೋಧ ಆಯ್ಕೆಗೆ ಪ್ರಕಾಶ್ ಹುಕ್ಕೇರಿ ಶ್ರಮಿಸಲಿ''

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಅಕ್ಟೋಬರ್ 27: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಉಮೇಶ್ ಕತ್ತಿ, ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಯಿಂದ ದಿ. ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕು ಎಂದರು.

ಬಿಜೆಪಿ ಪರ ಪ್ರಚಾರ: ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಆಕ್ರೋಶಬಿಜೆಪಿ ಪರ ಪ್ರಚಾರ: ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಆಕ್ರೋಶ

ಈ ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಅವರು ಚರ್ಚಿಸಿ ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹಾಕದಂತೆ ಮನವಿ ಮಾಡಲಿ ಎಂದು ಸಲಹೆ ನೀಡಿದರು.

Belagavi: BJP MLA Umesh Katti Reacted About Prakash Hukkeri Statement

ಮಾಜಿ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆಯಿಂದ ನನಗೆ ಸಂತೋಷವಾಗಿದೆ. ದಿ.ಸುರೇಶ ಅಂಗಡಿ ಅವರ ಪತ್ನಿಯನ್ನು ಆಯ್ಕೆ ಮಾಡಿ ಎಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಬೇಕು. ನಾವು ಕೂಡ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ನೀಡದಂತೆ ಪ್ರಕಾಶ ಹುಕ್ಕೇರಿ ನೋಡಿಕೊಳ್ಳಲಿ. ಬೆಂಗಳೂರು ಹಾಗೂ ದೆಹಲಿಯ ಹೈಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ಕೈಗೊಳ್ಳಲುಬಿಜೆಪಿ ಶಾಸಕ ಉಮೇಶ್ ಕತ್ತಿ ಆಗ್ರಹಿಸಿದರು.

ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.

English summary
BJP MLA Umesh Katti has Reacted On Congress leader Prakash Hukkeri support for the BJP in the Belagavi Lok Sabha by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X