ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ್ ಹೆಗಡೆ

ಬೆಳಗಾವಿ, ನವೆಂಬರ್ 04: 'ಮೈಸೂರ ಹುಲಿ ಟಿಪ್ಪು ಸುಲ್ತಾನ್ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ' ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಆದರೆ ಬೆಳಗಾವಿ ಜಿಲ್ಲಾಡಳಿತ ಅನಂತಕುಮಾರ್ ಹೆಗಡೆ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಿದೆ.

ಸಚಿವ ಹೆಗಡೆ ಅವರು ಮಾಡಿಕೊಂಡ ಮನವಿ ತೀವ್ರ ವಿವಾದಕ್ಕೆ ಗ್ರಾಸವಾಗಿತ್ತು. ಆದರೆ, ಬೆಳಗಾವಿ ಜಿಲ್ಲಾಡಳಿತ ಮಾತ್ರ ಶಿಷ್ಟಾಚಾರದ ಪ್ರಕಾರ ಟಿಪ್ಪು ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ ಹೆಗಡೆ ಅವರನ್ನು ವಿಶೇಷ ಆಮಂತ್ರಿತರೆಂದು ಅವರ ಹೆಸರನ್ನು ಮುದ್ರಿಸಿದೆ.

BJP MP Ananthkumar Hegde names appears on Tipu Jayanti Celebration Invitation

ರಾಜ್ಯಾದ್ಯಂತ ನ.10 ಕ್ಕೆ ಟಿಪ್ಪು ಜಯಂತಿ ಆಚರಣೆ ವಿಚಾರ‌ವಾಗಿ ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಮನವಿ ಮಾಡಿದ್ದ ಕೇಂದ್ರ ಸಚಿವ ಅನಂತಕುಮಾತ ಹೆಗಡೆ, ಸಂಸದ ಸುರೇಶ ಅಂಗಡಿ ಅವರ ಮನವಿಯನ್ನು ಬೆಳಗಾವಿ ಜಿಲ್ಲಾಡಳಿತ ಪರಿಗಣಿಸಿದೆ, ಟಿಪ್ಪು ಜಯಂತಿಗೆ ಆಹ್ವಾನಿಸಿದೆ.

ಇನ್ನು ಆಮಂತ್ರಣದಲ್ಲಿ ವಿಶೇಷ ಆಮಂತ್ರಿತರು ಎಂದು ಅನಂತಕುಮಾರ ಹೆಗಡೆ ಹೆಸರು ಹಾಗೂ ಗೌರವಾನ್ವಿತ ಅತಿಥಿಗಳಾಗಿ ಸಂಸದ ಸುರೇಶ ಅಂಗಡಿ ಅವರಿಗೆ ಆಮಂತ್ರಣ ನೀಡಿದೆ.

ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಆಯೋಜನೆ ಮಾಡಿದ ಟಿಪ್ಪು ಜಯಂತಿ ಕಾರ್ಯಕ್ರಮವು ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+