ಬಿಜೆಪಿ ರಾಜ್ಯ, ರಾಷ್ಟ್ರ ಮುಖಂಡರಿಂದ ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ
ಬೆಳಗಾವಿ, ಮಾರ್ಚ್ 01: ಅಕ್ರಮ ಕಸಾಯಿ ಖಾನೆ ವಿರುದ್ಧ ಧನಿ ಎತ್ತಿದ ಬಿಜೆಪಿ ಸದಸ್ಯರಿಗೆ ಬೆದರಿಕೆ ಒಡ್ಡಿದ ಪ್ರಕರಣ ಸುದ್ದಿಯಾಗುತ್ತಿದ್ದಂತೆ ಇಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರುಗಳು ಬೆಳಗಾವಿಗೆ ಬಂದು ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ ನಡೆಸಿದರು.
ಬೆಳಗಾವಿಯ 7 ಅಕ್ರಮ ಕಸಾಯಿ ಖಾನೆಯ ಮೇಲೆ ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ ಮುಚ್ಚುವಂತೆ ಆಗ್ರಹಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ್ ಎಂಬುವರಿಗೆ ಕಾಂಗ್ರೆಸ್ ಶಾಸಕ ಫಿರೋಜ್ ಸೇಠ್ ಸಹೋದರ ರಾಜು ಸೇಠ್ ಅವರು ಬೆದರಿಕೆ ಸಹ ಒಡ್ಡಿದ್ದರು. ಈ ವಿಷಯ ಸುದ್ದಿ ಆಗುತ್ತಿದ್ದಂತೆ ರಾಜ್ಯ ಮತ್ತು ರಾಷ್ಟ್ರ ಬಿಜೆಪಿ ನಾಯಕರು ಬೆಳಗಾವಿಗೆ ಆಗಮಿಸಿ ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚುವಂತೆ ಆಗ್ರಹಿಸಿದರು.

ಮೊದಲಿಗೆ ಪೊಲೀಸ್ ಕಮಿಷನರ್ ಅವರು ಬಿಜೆಪಿ ಸಂಸದರು ಮತ್ತು ಮುಖಂಡರನ್ನು ಒಳ ಹೋಗದಂತೆ ತಡೆದರು. ಇದರಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಯಿತು. ಪರಿಶೀಲನೆಗೆ ಬಂದ ಮಾಜಿ ಮುಖ್ಯಮಂತ್ರಿ, ಕೇಂದ್ರ ಮಂತ್ರಿಗಳನ್ನು , ಸ್ಥಳೀಯ ಸಂಸದರನ್ನು ತಡೆಯುತ್ತೀರಾ ಎಂದು ಜೋರು ಧ್ವನಿಯಲ್ಲಿ ಜಗದೀಶ್ ಶೆಟ್ಟರ್ ಅವರು ದಬಾಯಿಸಿದರು.
ಸಚಿವರು ಆದೇಶ ನೀಡಿದರೂ ಅಕ್ರಮ ಕಸಾಯಿ ಖಾನೆ ಬೀಗ ತೆರೆಯಲು ತಡ ಮಾಡಿದ ಪೊಲೀಸರ ವರ್ತನೆಗೆ ಕೋಪಗೊಂಡ ಸಚಿವೆ ಮೇನಕಾ ಗಾಂಧಿ ಅವರು ಎಸಿಪಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಕೋಲ್ಡ್ ಸ್ಟೋರೇಜ್ ಹೆಸರಿನಲ್ಲಿ ಅಕ್ರಮ ಕಸಾಯಿ ಖಾನೆ ನಡೆಸಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರ ಬೆಂಬಲ ಇದೆ ಹಾಗಾಗಿ ಈ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಮನವಿ ಮಾಡಲಾಗುವುದು ಈ ಪ್ರಕರಣದಲ್ಲಿ ಅಕ್ರಮಕ್ಕೆ ಸಹಕರಿಸಿದ ಪೊಲೀಸರ ಮೇಲೂ ತನಿಖೆ ಮಾಡುವಂತೆ ಕೋರಲಾಗುವುದು ಎಂದು ಮೇನಕಾ ಗಾಂಧಿ ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications