ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; ನದಿಯಲ್ಲಿ ಸಿಕ್ಕ ಶವದೊಂದಿಗೆ ಇತ್ತು 1.5 ಕೆಜಿ ಚಿನ್ನ!

|
Google Oneindia Kannada News

ಬೆಳಗಾವಿ, ಅಕ್ಟೋಬರ್ 08: ಕೃಷ್ಣಾ ನದಿಯಲ್ಲಿ ತೇಲಿ ಬಂದ ಶವದೊಂದಿಗೆ 1.5 ಕೆಜಿ ಚಿನ್ನ ಸಿಕ್ಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆಯನ್ನು ನಡೆಸಿದರು.

ಅಕ್ಟೋಬರ್ 4ರಂದು ಅಥಣಿ ತಾಲೂಕಿನ ಅವರಖೋಡ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿಯಲ್ಲಿ ಪುರುಷನ ಶವವೊಂದು ಪತ್ತೆಯಾಗಿತ್ತು. ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆಮಹಾರಾಷ್ಟ್ರದಲ್ಲಿ ಭಾರೀ ಮಳೆ: ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ

ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಶವದ ಜೊತೆ 1.5 ಕೆಜಿ ಚಿನ್ನ ಸಹ ಇರುವುದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಗರ ಪಾಟೀಲ (30) ಎಂಬ ಗುರುತು ಸಿಕ್ಕಿದೆ.

ಕೇರಳದಲ್ಲಿ N-95 ಮಾಸ್ಕ್‌ನಲ್ಲಿ ಅಕ್ರಮ ಚಿನ್ನ ಸಾಗಣೆ: ವಿಮಾನ ಪ್ರಯಾಣಿಕನ ಬಂಧನ ಕೇರಳದಲ್ಲಿ N-95 ಮಾಸ್ಕ್‌ನಲ್ಲಿ ಅಕ್ರಮ ಚಿನ್ನ ಸಾಗಣೆ: ವಿಮಾನ ಪ್ರಯಾಣಿಕನ ಬಂಧನ

Body Found In Krishna River Along With 1.5 Kg Gold

ಸಾಂಗ್ಲಿ ಜಿಲ್ಲೆಯ ಮಿರಜ ತಾಲೂಕಿನ ಪಾಟಗಾಂವ ಗ್ರಾಮದ ನಿವಾಸಿ ಎಂಬುದನ್ನು ಪತ್ತೆ ಹಚ್ಚಿದ ಪೊಲೀಸರು ಕುಟುಂಬದವರಿಗೆ ಈ ಕುರಿತು ಮಾಹಿತಿ ನೀಡಿದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಣವನ್ನು ದಾಖಲು ಮಾಡಿಕೊಂಡರು.

ಮೈಸೂರಿಗರೇ ಹುಷಾರ್: 12 ಲಕ್ಷ ರೂ. ಮೌಲ್ಯದ ಚಿನ್ನ ದರೋಡೆ ಮಾಡಿದ್ದ 5 ದುಷ್ಕರ್ಮಿಗಳ ಬಂಧನ ಮೈಸೂರಿಗರೇ ಹುಷಾರ್: 12 ಲಕ್ಷ ರೂ. ಮೌಲ್ಯದ ಚಿನ್ನ ದರೋಡೆ ಮಾಡಿದ್ದ 5 ದುಷ್ಕರ್ಮಿಗಳ ಬಂಧನ

ಶವದ ಮೇಲೆ ಗಾಯದ ಗುರುತುಗಳಿದ್ದು ಸಾಗರ ಪಾಟೀಲ ಮೃತಪಟ್ಟಿದ್ದು ಹೇಗೆ? ಎಂದು ತನಿಖೆ ನಡೆಯುತ್ತಿದೆ. ಶವದ ಜೊತೆ ಚಿನ್ನ ಸಿಕ್ಕಿರುವುದು ಕಂಡು ಪೊಲೀಸರು ಸಹ ಅಚ್ಚರಿಗೊಂಡಿದ್ದಾರೆ.

ಅಥಣಿ ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕುಟುಂಬದವರಿಗೆ ಶವವನ್ನು ಹಸ್ತಾಂತರ ಮಾಡಿದರು. ಇದು ಕೊಲೆಯೇ?, ಆತ್ಮಹತ್ಯೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

English summary
Maharashtra based 30 year old man body found in Krishna river in Belagavi district Athani. Police found 1.5 kg gold along with the dead body.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X