Bomb Threat: ಈ ಶ್ರೀರಾಮ ಮಂದಿರ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಪತ್ರ
ಬೆಳಗಾವಿ, ಮಾರ್ಚ್ 09: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆ ಆಗಿ ಶ್ರಿರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಬಳಿಕ ದೇಶಾದ್ಯಂತ ರಾಮಜಪ ಶುರುವಾಗಿದೆ. ಆದರೆ ಇದನ್ನು ಸಹಿಸದ ಕೆಲವು ಭಯೋತ್ಪಾದಕರು ಬೆದರಿಕೆ ಒಡ್ಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಪುರಾಣ ಪ್ರಸಿದ್ಧ ಶ್ರೀರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಲಾಗಿದೆ. ಈ ಕುರಿತು ಅನ್ಯಕೋಮಿನ ದುಷ್ಕರ್ಮಿಗಳಿಂದ ರಾಮಮಂದಿರಕ್ಕೆ ಪತ್ರ ಬರೆಯಲಾಗಿದೆ.

ಹಿಂದಿ/ ಉರ್ದು ಭಾಷೆಯಲ್ಲಿ ಅಲ್ಲಾಹು ಅಕ್ಬರ್ ಶಿರ್ಷಿಕೆಯ ಪತ್ರದಲ್ಲಿ ಬೆದರಿಕೆ ಒಡ್ಡಿರುವ ಪತ್ರ ಪತ್ತೆಯಾಗಿದೆ. ಪತ್ರದ ಉದ್ದಕ್ಕೆ ದುಷ್ಕರ್ಮಿಗಲು ಎರಡು ಭಾಷೆಯಲ್ಲಿ ಬೆದರಿಕೆ ಒಡ್ಡಿದ್ದಾರೆ.
ಮೋದಿ..ಮೋದಿ ಎನ್ನುತ್ತಿದ್ದೀರಿ
ಪತ್ರದಲ್ಲಿ ಅಯೋಧ್ಯೆ ರಾಮ ಮಂದಿರ ಕಟ್ಟಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾವೇಕೆ ಸುಮ್ಮನಿರಬೇಕು ಎಂದು ಪ್ರಶ್ನಿಸಿದ್ದಾರೆ. ಶ್ರೀ ರಾಮ ಜಯರಾಮ ಎಂದು ಕೂಗಾಡಿ ದೇಶದಲ್ಲಿ ಮುಸ್ಲಿಂ ಸಮಾಜವನ್ನು ಹೀಯಾಳಿಸುತ್ತಿದ್ದೀರಿ, ಮೋದಿ... ಮೋದಿ ಎಂದು ಏನು ಕೂಗುತ್ತಿದ್ದೀರಿ.
ರಾಷ್ಟ್ರೀಯ ಸ್ವಯ ಸೇವಕ ಸಂಘ (RSS) ಹಾಗೂ BJPಯನ್ನೂ ಸಹ ಪತ್ರದಲ್ಲಿ ತರಾಟೆಗೆ ತೆಗೆದುಕೊಂಡಿರುವ ದುಷ್ಕರ್ಮಿಗಳು ಬೆಳಗಾವಿಯ ನಿಪ್ಪಾಣಿಯಲ್ಲಿನ ಹಿಂದೂಗಳ ಆರಾಧ್ಯ ಶ್ರೀ ರಾಮಮಂದಿರ ದೊಡ್ಡ ಪ್ರಮಾಣದಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ನಿಪ್ಪಾಣಿ ಠಾಣೆಯಲ್ಲಿ ಪ್ರಕರಣ ದಾಖಲು
ಈ ಕುರಿತು ಸ್ಥಳೀಯ ನಿಪ್ಪಾಣಿ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು ಈ ಪತ್ರ ಎಲ್ಲಿಂದ ಬಂದಿದೆ. ಯಾರು ಬರೆದಿದ್ದಾರೆ ಎಂದೆಲ್ಲ ತನಿಖೆ ಶುರು ಮಾಡಿದ್ದಾರೆ. ಅಲ್ಲದೇ ನಿಪ್ಪಾಣಿಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜನರ ಹಿತ ದೃಷ್ಟಿಯಿಂದ ಡಿಎಆರ್ ಪೊಲೀಸ್ ತುಕುಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ಸೇರಿ ಮೂವರಿಗೆ ಬೆದರಿಕೆ ಇ-ಮೇಲ್
ಇನ್ನೂ ಮೊನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹಸಚಿವ ಜಿ. ಪರಮೇಶ್ವರ್ ಅವರು ಸಹ ಬಾಂಬ್ ಬೆದರಿಕೆ ಮೇಲ್ ಅನ್ನು ಸ್ವೀಕರಿಸಿದ್ದಾರೆ. ಬೆದರಿಕೆಯ ಮೇಲ್ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರೋಟಾನ್ ಇ-ಮೇಲ್ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಡಿವಾಣ ಹಾಕಬೇಕಿದೆ. ಬಂದ ಇಮೇಲ್ ಪ್ರೋಟಾನ್ ನಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications