ಇಳಿಮುಖವಾದ ಮಳೆ; ಮುಳುಗಡೆ ಆಗಿದ್ದ ಬೆಳಗಾವಿಯ ಬಹುತೇಕ ಸೇತುವೆಗಳು ಸಂಚಾರಕ್ಕೆ ಮುಕ್ತ
ಬೆಳಗಾವಿ, ಆಗಸ್ಟ್ 22: ನಿರಂತರ ಮಳೆಯಿಂದ ಗಡಿ ಜಿಲ್ಲೆ ಬೆಳಗಾವಿಯ ಸಪ್ತನದಿಗಳು ಅಪಾಯಮಟ್ಟ ಮೀರಿ ಹರಿದ ಪರಿಣಾಮ ನದಿ ಪಾತ್ರದ ಅನೇಕ ಸೇತುವೆಗಳು ಜಲಾವೃತಗೊಂಡಿದ್ದವು. ಇದೀಗ ಕಳೆದ ಮೂರು ದಿನಗಳಿಂದ ಮಳೆ ನಿಂತಿದ್ದು, ಜಿಲ್ಲೆಯ ಬಹುತೇಕ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.
ಘಟಪ್ರಭಾ ನದಿಯಿಂದ ಮುಳುಗಡೆ ಆಗಿದ್ದ ಗೋಕಾಕ ಹೊರವಲಯದ ಲೋಳಸೂರ ಸೇತುವೆ ಮೇಲೆ ಸಂಚಾರ ಪುನರಾರಂಭವಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇತುವೆಯ ತಾತ್ಕಾಲಿಕ ದುರಸ್ತಿ ಮಾಡಿದ್ದು, ವಾಹನಗಳ ಸಂಚಾರ ಪುನರಾರಂಭವಾಗಿದೆ. ಸೇತುವೆ ಮುಳುಗಡೆ ಆಗಿದ್ದರ ಪರಿಣಾಮ ಜತ್ತ-ಜಾಂಬೋಟಿ ಹೆದ್ದಾರಿ ಬಂದ್ ಆಗಿತ್ತು. ಅಲ್ಲದೇ ಸಂಕೇಶ್ವರ-ಗೋಕಾಕ ಹಾಗೂ ಗೋಕಾಕ-ಯರಗಟ್ಟಿ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು. ಇದೀಗ ಸಂಚಾರ ಮರು ಆರಂಭವಾಗಿದೆ.

ನಗರದ ಸಿಂಗಳಾಪುರ ಸೇತುವೆ ಮೇಲಿಂದ ನೀರು ಹಿಂದೆ ಸರಿದಿಲ್ಲ. ನಗರಕ್ಕೆ ಸಂಪರ್ಕ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಲೋಳಸೂರ ಸೇತುವೆ ಮೂಲಕ ಕನಿಷ್ಠ ನಾಲ್ಕು ಕಿ.ಮೀ. ದೂರ ಸುತ್ತು ಬಳಸಿ ಪ್ರಯಾಣಿಸಬೇಕಿದೆ. ಕೊಣ್ಣೂರ, ಮೇಲ್ಮಟ್ಟಿ, ಸಾವಳಗಿ, ನಂದಗಾಂವ ಮೊದಲಾದ ತಾಲ್ಲೂಕಿನ ಪ್ರಮುಖ ಗ್ರಾಮಗಳಿಗೆ ತೆರಳಲು ಸಂಪರ್ಕ ಕೊಂಡಿಯಾಗಿದ್ದ ಚಿಕ್ಕೋಳಿ ಸೇತುವೆ ಕೂಡ ಸಂಚಾರಕ್ಕೆ ಮುಕ್ತಗೊಂಡಿದೆ.
ಮಲಪ್ರಭಾ ನದಿಯ ರಭಸಕ್ಕೆ ಮುಳುಗಡೆ ಆಗಿದ್ದ ಜಿಲ್ಲೆಯ ಖಾನಾಪುರ ತಾಲೂಕಿನ ಯಡೋಬಾ- ಚಾಪಾಗಾವಿ, ಪಾರಿಶ್ವಾಡ ರಸ್ತೆಗಳಲ್ಲಿ ಇದೀಗ ಜನರು ಸಂಚರಿಸುತ್ತಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications