ಇಳಿಮುಖವಾದ ಮಳೆ; ಮುಳುಗಡೆ ಆಗಿದ್ದ ಬೆಳಗಾವಿಯ ಬಹುತೇಕ ಸೇತುವೆಗಳು ಸಂಚಾರಕ್ಕೆ ಮುಕ್ತ
ಬೆಳಗಾವಿ, ಆಗಸ್ಟ್ 22: ನಿರಂತರ ಮಳೆಯಿಂದ ಗಡಿ ಜಿಲ್ಲೆ ಬೆಳಗಾವಿಯ ಸಪ್ತನದಿಗಳು ಅಪಾಯಮಟ್ಟ ಮೀರಿ ಹರಿದ ಪರಿಣಾಮ ನದಿ ಪಾತ್ರದ ಅನೇಕ ಸೇತುವೆಗಳು ಜಲಾವೃತಗೊಂಡಿದ್ದವು. ಇದೀಗ ಕಳೆದ ಮೂರು ದಿನಗಳಿಂದ ಮಳೆ ನಿಂತಿದ್ದು, ಜಿಲ್ಲೆಯ ಬಹುತೇಕ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.
ಘಟಪ್ರಭಾ ನದಿಯಿಂದ ಮುಳುಗಡೆ ಆಗಿದ್ದ ಗೋಕಾಕ ಹೊರವಲಯದ ಲೋಳಸೂರ ಸೇತುವೆ ಮೇಲೆ ಸಂಚಾರ ಪುನರಾರಂಭವಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇತುವೆಯ ತಾತ್ಕಾಲಿಕ ದುರಸ್ತಿ ಮಾಡಿದ್ದು, ವಾಹನಗಳ ಸಂಚಾರ ಪುನರಾರಂಭವಾಗಿದೆ. ಸೇತುವೆ ಮುಳುಗಡೆ ಆಗಿದ್ದರ ಪರಿಣಾಮ ಜತ್ತ-ಜಾಂಬೋಟಿ ಹೆದ್ದಾರಿ ಬಂದ್ ಆಗಿತ್ತು. ಅಲ್ಲದೇ ಸಂಕೇಶ್ವರ-ಗೋಕಾಕ ಹಾಗೂ ಗೋಕಾಕ-ಯರಗಟ್ಟಿ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು. ಇದೀಗ ಸಂಚಾರ ಮರು ಆರಂಭವಾಗಿದೆ.

ನಗರದ ಸಿಂಗಳಾಪುರ ಸೇತುವೆ ಮೇಲಿಂದ ನೀರು ಹಿಂದೆ ಸರಿದಿಲ್ಲ. ನಗರಕ್ಕೆ ಸಂಪರ್ಕ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಲೋಳಸೂರ ಸೇತುವೆ ಮೂಲಕ ಕನಿಷ್ಠ ನಾಲ್ಕು ಕಿ.ಮೀ. ದೂರ ಸುತ್ತು ಬಳಸಿ ಪ್ರಯಾಣಿಸಬೇಕಿದೆ. ಕೊಣ್ಣೂರ, ಮೇಲ್ಮಟ್ಟಿ, ಸಾವಳಗಿ, ನಂದಗಾಂವ ಮೊದಲಾದ ತಾಲ್ಲೂಕಿನ ಪ್ರಮುಖ ಗ್ರಾಮಗಳಿಗೆ ತೆರಳಲು ಸಂಪರ್ಕ ಕೊಂಡಿಯಾಗಿದ್ದ ಚಿಕ್ಕೋಳಿ ಸೇತುವೆ ಕೂಡ ಸಂಚಾರಕ್ಕೆ ಮುಕ್ತಗೊಂಡಿದೆ.
ಮಲಪ್ರಭಾ ನದಿಯ ರಭಸಕ್ಕೆ ಮುಳುಗಡೆ ಆಗಿದ್ದ ಜಿಲ್ಲೆಯ ಖಾನಾಪುರ ತಾಲೂಕಿನ ಯಡೋಬಾ- ಚಾಪಾಗಾವಿ, ಪಾರಿಶ್ವಾಡ ರಸ್ತೆಗಳಲ್ಲಿ ಇದೀಗ ಜನರು ಸಂಚರಿಸುತ್ತಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications