ಬೆಳಗಾವಿ: ಪತ್ನಿ, ಪುತ್ರನ ಜೊತೆ ಉದ್ಯಮಿ ಆತ್ಮಹತ್ಯೆ
ಬೆಳಗಾವಿ. ಮೇ,29: ಹಣಕಾಸಿನ ವಿಷಯದಲ್ಲಿ ವ್ಯಾಪಾರಿಯೊಬ್ಬರ ಕುಟುಂಬವೊಂದು ವಂಚನೆ ಮಾಡಿದ್ದರಿಂದ ಮನನೊಂದ ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ವಿಷ ಸೇವಿಸಿ, ಪತ್ನಿ ಮತ್ತು ಪುತ್ರನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿ ಮಹಾಂತೇಶ ಮಲ್ಲಿಕಾರ್ಜುನ ಧವನ್(45), ಪತ್ನಿ ಶೋಭಾ (38) ಹಾಗೂ ಪುತ್ರ ಅಮೋಘ (12) ಬೆಳಗಾವಿಯ ಗಾಂಧಿನಗರದಲ್ಲಿರುವ ಖಾಸಗಿ ಹೊಟೇಲ್ನಲ್ಲಿ ಸಾವಿಗೆ ಶರಣಾಗಿದ್ದಾರೆ.
ಏನಿದು ಘಟನೆ:
ಮಹಾಂತೇಶ ಅವರ ಮಗ ಅಮೋಘನಿಗೆ ಉಸಿರಾಟದ ಸಮಸ್ಯೆ ಇತ್ತು. ಮಗನಿಗೆ ಚಿಕಿತ್ಸೆ ನೀಡಲು ನಾವು ಗೋವಾಗೆ ಹೋಗುತ್ತಿದ್ದೇವೆ ಎಂದು ಮನೆಯವರಿಗೆ ತಿಳಿಸಿದ್ದ ಮಹಾಂತೇಶ ಕುಟುಂಬ ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಮಂಗಳವಾರ ತಂಗಿದ್ದರು.
ರಾತ್ರಿ ವೇಳೆ ಶೋಭಾ ಸಹೋದರನಿಗೆ ಕರೆ ಮಾಡಿ ನಮ್ಮ ಬದುಕು ಮುಗಿಯಿತು ನಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಸಹೋದರ ಕೂಡಲೇ ಶೋಭಾರಿಗೆ ಕರೆ ಮಾಡಿದರೂ ಶೋಭಾ ಕರೆ ಸ್ವೀಕರಿಸಿಲ್ಲ ಎನ್ನಲಾಗಿದೆ. ಕೂಡಲೇ ಅವರು ಬೆಳಗಾವಿ ಕಂಟ್ರೋಲ್ ರೂಮಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಇನ್ಸ್ಪೆಕ್ಟರ್ ಸಂಜೀವ ಕುಮಾರ್ ನೇತೃತ್ವದಲ್ಲಿ ಪೊಲೀಸರು ಸಂಜಿವ್ ಕುಮಾರ್ ತಂಗಿದ್ದ ಹೊಟೇಲ್ನ ಕೊಠಡಿಯ ಬಾಗಿಲನ್ನು ಬಡಿದರೂ ತೆರೆಯಲಿಲ್ಲ. ಬಾಗಿಲನ್ನು ಒಡೆದು ಒಳಗೆ ನೋಡಿದಾಗ ಮೂವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಆತ್ಮಹತ್ಯೆ ಮಾಡುವ ಮುನ್ನಾ ಮಹಾಂತೇಶ ಅವರು ಮರಣ ಪತ್ರ ಬರೆದಿದ್ದು ಮರಣಕ್ಕೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಶ್ರೀ ಸಿಲ್ವರ್ ಪ್ಯಾಲೇಸ್ ಮಲೀಕರಾದ ನಿತಿನ್ ಪಟಾಡಿಯಾ, ಆದರ್ಶ ಪಟಾಡಿಯಾ ಮತ್ತು ಅವರ ತಂದೆ ಸುರೇಶ್ ಪಟಾಡಿಯಾ ಕಾರಣ ಎಂದು ಬರೆದ್ದಾರೆ. ಇವರು ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿ ವಿಶ್ವಾಸದ್ರೋಹ ಮಾಡಿರುವ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿದ್ದೇವೆ ಎಂದು ಇಂಗ್ಲಿಷ್ನಲ್ಲಿ ಮರಣ ಪತ್ರ ಟೈಪ್ ಮಾಡಿ ಸಹಿ ಮಾಡಿದ್ದಾರೆ. [ಬೆಳಗಾವಿ : ಶಿಕ್ಷಕರಿಗೆ ರಜಾ, ಕಳ್ಳರಿಗೆ ಮಜಾ!]
ನಿತಿನ್ ಪಟಾಡಿಯಾ ನೀಡಿರುವ ಪೊಟ್ಯಾಶಿಯಂ ಸಯನೈಡ್ನಲ್ಲಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲಿ ನೇರವರೆಸಿಸ ಎಂದು ಮರಣ ಪತ್ರದಲ್ಲಿ ತಿಳಿಸಿದ್ದಾರೆ.
ತಂದೆ ಮಕ್ಕಳು ನಾಪತ್ತೆ:
ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ನಿತಿನ್,ಆದರ್ಶ, ಸುರೇಶ್ ಪಟಾಡಿಯಾ ನಾಪತ್ತೆಯಾಗಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದು ಇವರ ಬಂಧನವಾದ ಬಳಿಕವಷ್ಟೇ ನಿಜವಾದ ಘಟನೆ ಏನು ಎಂಬುದು ಬಹಿರಂಗವಾಗಬೇಕಿದೆ.
ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರಾಗಿರುವ ಮಹಾಂತೇಶ ಅವರು ಸುಮಾರು 18 ವರ್ಷಗಳಿಂದ ಧಾರವಾಡದ ಬೇಲೂರಿನಲ್ಲಿ ಕೈಗಾರಿಕೆಗಳ ವಾಲ್ವ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಆರ್ಥಿಕವಾಗಿ ಸದೃಢವಾಗಿಯೇ ಇದ್ದ ಮಹಾಂತೇಶ ಅವರಿಗೆ ತಂದೆ ಮಕ್ಕಳು ದೊಡ್ಡ ಮೊತ್ತದ ಹಣವನ್ನು ನೀಡದೇ ವಂಚಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications