ಬೆಳಗಾವಿ ಉಪ ಚುನಾವಣೆ: ಅಡ್ರೆಸ್ ಇಲ್ಲದೇ ಕಾಂಗ್ರೆಸ್ ಅಧೋಗತಿಗೆ; ಸಚಿವ ಶೆಟ್ಟರ್ ಗೇಲಿ
ಬೆಳಗಾವಿ, ಏಪ್ರಿಲ್ 3: ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಅಡ್ರೆಸ್ ಇಲ್ಲದೆ ಅಧೋಗತಿಗೆ ಹೋಗುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗೇಲಿ ಮಾಡಿದರು.
ಬೆಳಗಾವಿ ಲೋಕಸಭೆ ಉಪ ಚುನಾವಣೆ ಅಂಗವಾಗಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ದೇಶದ ಬದಲಾವಣೆ ಅಸಾಧ್ಯ. ಪ್ರಬುದ್ಧತೆಯಿಲ್ಲದ ರಾಹುಲ್ ಗಾಂಧಿಗೂ, ದಿನದ 24 ಗಂಟೆ ಜನಸೇವೆ ಮಾಡುತ್ತಿರುವ ನರೇಂದ್ರ ಮೋದಿಗೂ ಎಲ್ಲಿಯ ಹೋಲಿಕೆ. ಒಳ ಜಗಳದ ಕಾಂಗ್ರೆಸ್ಸಿಗರೇ ಟೀಕೆ ಬಿಟ್ಟು ಕೇಂದ್ರದ ಸಾಧನೆ ತಿಳಿದುಕೊಳ್ಳಿ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ರೈತರ ಜೀವನವನ್ನು ಹಸನಾಗಿಸಲು ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನು ಜಾರಿಗೆಗೆ ಕಾಂಗ್ರೆಸ್ ವಿರೋಧಿಸುತ್ತಿದೆ. ರೈತರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ರೈತರ ಉದ್ಧಾರ ಬಯಸದ ಕಾಂಗ್ರೆಸ್ಸಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದರು.

ಕಿತ್ತೂರು ಚೆನ್ನಮ್ಮನ, ಸಂಗೊಳ್ಳಿ ರಾಯಣ್ಣನ ನಾಡಿನ ಬೈಲಹೊಂಗಲದ ಜನತೆ ಸುರೇಶ್ ಅಂಗಡಿ ಅವರಿಗೆ 4 ಸಲ ಆಶೀರ್ವದಿಸಿದ್ದಾರೆ. ಅದೇ ರೀತಿ ಮಂಗಲ ಸುರೇಶ್ ಅಂಗಡಿ ಅವರಿಗೆ ಆಶೀರ್ವದಿಸಿ ದೇಶದ ಬದಲಾವಣೆಗಾಗಿ ಬಿಜೆಪಿಗೆ ಮತ ನೀಡಿ ಅತ್ಯಧಿಕ ಅಂತರದಿಂದ ಗೆಲುವು ತಂದುಕೊಡಬೇಕು ಎಂದು ಮನವಿ ಮಾಡಿದರು.
ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಭಾರತಕ್ಕೆ ಶಾಪವಾಗಿ ಪರಿಣಮಿಸಿದೆ ಅವರ ದುರಾಡಳಿತ ಸ್ವಾರ್ಥದಿಂದ ದೇಶ ಅಧೋಗತಿಗೆ ತಲುಪಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ಬದಲಾವಣೆ ಮೂಲೆ-ಮೂಲೆಗಳಲ್ಲಿ ಕಾಣಸಿಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಕುಟುಂಬ ರಾಜಕಾರಣವನ್ನು ಮುಂದಿಟ್ಟುಕೊಂಡು ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಧಾನಿಗಳಾಗಿ ಈಗ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಹೊರಟಿರುವ ಕಾಂಗ್ರೆಸ್ ನೀತಿ ದುರಾದೃಷ್ಟಕರ ಎಂದು ಟೀಕಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications