ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 1: ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ನಡೆಸಿದರು.

ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾದ್ಯ-ಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ್ ಅವರ ಪರ ಘೋಷಣೆಗಳನ್ನು ಕೂಗಿದರು.

ಸುರೇಶ್ ಅಂಗಡಿ ಪತ್ನಿ ಸ್ಪರ್ಧೆ: ಸತೀಶ್ ಜಾರಕಿಹೊಳಿ ಹಣೆಬರಹ ಈ ಹಿರಿಯ ಕಾಂಗ್ರೆಸ್ ಮುಖಂಡರ 'ಕೈ'ಯಲ್ಲಿ!ಸುರೇಶ್ ಅಂಗಡಿ ಪತ್ನಿ ಸ್ಪರ್ಧೆ: ಸತೀಶ್ ಜಾರಕಿಹೊಳಿ ಹಣೆಬರಹ ಈ ಹಿರಿಯ ಕಾಂಗ್ರೆಸ್ ಮುಖಂಡರ 'ಕೈ'ಯಲ್ಲಿ!

ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, "ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ. ಅವರು ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ.

Belagavi By-Election: Satish Jarkiholi And Lakshmi Hebbalkar Election Campaigned In Belagavi Rural

ಹೀಗಾಗಿ, ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶ್ ಅಣ್ಣ ಅವರನ್ನು ಗೆಲ್ಲಿಸುವ ಮೂಲಕ ದಿಲ್ಲಿಗೆ ಸಂದೇಶ ರವಾನಿಸಬೇಕಾಗಿದೆ ಎಂದು ಹೇಳಿದರು.

"ಸತೀಶ್ ಜಾರಕಿಹೊಳಿ ಅವರ ಗೆಲುವಿಗೆ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹಗಲು-ರಾತ್ರಿ ಎನ್ನದೇ ಶ್ರಮಿಸುತ್ತೇವೆ' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾರ್ಯಕರ್ತರಿಂದ ಶಪಥ ಮಾಡಿಸಿದರು. ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ ಎಂದು ಕಾರ್ಯಕರ್ತರಿಗೆ ಲಕ್ಷ್ಮಿ ಕರೆ ನೀಡಿದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾತನಾಡಿ, "ಗ್ರಾಮೀಣ ಕ್ಷೇತ್ರದ ಜನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಮತ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ' ಎಂದು ಹೇಳಿದರು.

"ಗ್ರಾಮೀಣ ಮತಕ್ಷೇತ್ರದ ಜನರೊಂದಿಗೆ ಮೊದಲಿನಿಂದಲೂ ನನಗೆ ನಿಕಟ ಸಂಪರ್ಕವಿದೆ. ಇಲ್ಲಿನ ಮತದಾರರು ಯಾವಾಗಲು ಕಾಂಗ್ರೆಸ್ ಪರವಾಗಿಯೇ ಇದ್ದಾರೆ. ಈ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ'' ಎಂದು ಗ್ರಾಮೀಣ ಮತದಾರರ ಬಗ್ಗೆ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

Recommended Video

ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

English summary
Lakshmi Lakshmi Hebbalkar campaigned with Belagavi Lok Sabha by-election Congress candidate Satish Jarkiholi in Uchagaon village of Belagavi rural constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X