ಸಚಿವ ಸಂಪುಟ ಪುನಾರಚನೆ: ಮಂತ್ರಿ ಸ್ಥಾನದ ಆಕಾಂಕ್ಷಿಯೇ ಶಾಸಕ ಲಕ್ಷ್ಮಣ ಸವದಿ? ಹೇಳಿದ್ದೇನು
ಬೆಳಗಾವಿ, ನವೆಂಬರ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಯಾವಾಗ ಎಂದು ಹೇಳಲು ನಾನೇನು ಭವಿಷ್ಯ ಹೇಳುವವನಲ್ಲ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಲಿದೆ. ಅವರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದು ಅವರು ಸಚಿವ ಸ್ಥಾನದ ಆಕಾಂಕ್ಷಿ ಎಂಬ ಪ್ರಶ್ನೆಗೆ ಅವರು ಮಾರ್ಮಿಕವಾಗಿ ಹೇಳಿದರು.
ಚಿಕ್ಕೋಡಿಯಲ್ಲಿ ಸುದ್ದಿಗಾರರ ಜೊತೆಗೆ ಶುಕ್ರವಾರ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ನನ್ನ ಬಳಿ ಉತ್ತರವಿಲ್ಲ. ನಿಮ್ಮ ಮನಸ್ಸಿನಲ್ಲಿ ಏನಿದೆ ಹೇಳಿ ನೀವು ಬೇಡಿಕೆ ಇಡು ಎಂದರೆ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಡುವ ಎಂದು ಮಾಧ್ಯಮವರದನ್ನು ಪ್ರಶ್ನಿಸಿದರು. ಈ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಅವರು ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರು ಸಚಿವ ಸಂಪುಟ ಪುನರಚನೆ ವೇಳೆ ಬೆಳಗಾವಿ, ಚಿಕ್ಕೋಡಿ ಭಾಗದ ಜನರ ಒತ್ತಾಸೆಯನ್ನು ಗಮನಕ್ಕೆ ತೆಗೆದುಕೊಳ್ಳಬೇಕು ಎನ್ನುವ ಮೂಲಕ ಜನರ ಆಸೆಯಂತೆ ನನಗೆ ಸಚಿವ ಸ್ಥಾನ ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ ಪರೋಕ್ಷವಾಗಿ ತಿಳಿಸಿದರು.
ಬೆಳಗಾವಿ ವಿಭಜನೆ ಮಾಡಿದರೆ ತಪ್ಪೇನು?
ಬೆಳಗಾವಿ ಜಿಲ್ಲೆಯ ವಿಭಜನೆಗೆ ಶಾಸಕ ಲಕ್ಷ್ಮಣ ಸವದಿ ಅವರು ಸಮ್ಮತಿಸಿದರು. ಬೆಳಗಾವಿ ಜಿಲ್ಲೆಯ ಗೋಕಾಕ, ಚಿಕ್ಕೋಡಿ, ಅಥಣಿ ಜಿಲ್ಲೆ ಮಾಡುವದರಲ್ಲಿ ಯಾವುದೇ ತಪ್ಪಿಲ್ಲ. ಈ ಭಾಗದ ಜನರ ಆಶಯವನ್ನು ಮುಖ್ಯಮಂತ್ರಿ ಗಳ ಗಮನಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.
ಏತ ನೀರಾವರಿ ಯೋಜನೆ ನೆನೆಗುದಿಗೆ
ಕಾಗವಾಡ ಮತಕ್ಷೇತ್ರದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿದೆ. ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಅವರು ಹೇಳಿದ್ದರು. ರಾಜು ಕಾಗೆ ಅವರೇನು ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ. ಬಾಗಲಕೋಟೆ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ.
ವಿದ್ಯುತ್ ಸರಬರಾಜು ವಿಚಾರವಾಗಿ ತಾಂತ್ರಿಕ ತೊಂದರೆ ಇತ್ತು. ಅದನ್ನು ಆದಷ್ಟು ಬೇಗ ಸರಿಪಡಿಸಿ ಮೊದಲ ಹಂತದ ಕಾಮಗಾರಿ ಅತಿಶೀಘ್ರದಲ್ಲಿ ಚಾಲನೆ ನೀಡುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications