ನೀತಿ ಸಂಹಿತೆ ಉಲ್ಲಂಘನೆ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ದೂರು
ಬೆಳಗಾವಿ, ಏಪ್ರಿಲ್ 24: ನಿನ್ನೆ ನಡೆದ ಕರ್ನಾಟಕ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.
ತಮಗೆ ಸಂಬಂಧವಿಲ್ಲದ ಮತಗಟ್ಟೆಗೆ ಹೋಗಿದ್ದಲ್ಲದೆ, ಸಾಲಿನಲ್ಲಿ ನಿಂತಿದ್ದ ಮತದಾರರ ಬಳಿ ಮತಯಾಚನೆ ಮಾಡಿದ್ದಾರೆಂದು ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ನಿನ್ನೆ ಮತದಾನದ ನಡೆಯುವ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ವಿಜಯನಗರ ಮತಗಟ್ಟೆಗೆ ಹೋಗಿದ್ದರು, ಅಲ್ಲದೆ ಮತಚಲಾಯಿಸಲು ಸಾಲುಗಟ್ಟಿ ನಿಂತಿದ್ದ ವ್ಯಕ್ತಿಗಳ ಮತಯಾಚನೆ ಮಾಡಿದ್ದರು.

ಚುನಾವಣಾ ನೀತಿ ಸಂಹಿತೆ ಪ್ರಕಾರ, ಆಯೋಗದಿಂದ ಅನುಮತಿ ಪಡೆದ ವ್ಯಕ್ತಿಗಳಷ್ಟೆ ತಮ್ಮದಲ್ಲದ ಮತಗಟ್ಟೆ ಒಳಗೆ ಹೋಗಬಹುದು, ಅಲ್ಲದೆ, ಮತಗಟ್ಟೆಯ ನೂರು ಮೀಟರ್ ಒಳಗೆ ಯಾರೂ ಮತಯಾಚನೆ ಮಾಡುವಂತಿಲ್ಲ. ಇವೆರಡು ನಿಯಮನವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುರಿದಿದ್ದಾರೆಂದು ಆರೋಪಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆಯೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಾಗಿತ್ತು. ಅಲ್ಲದೆ, ಅವರು ಮತದಾರರಿಗೆ ಕುಕ್ಕರ್ ನೀಡಿ ಆಮೀಷ ಒಡ್ಡಿದ್ದಾರೆಂದು ಆರೋಪಿಸಲಾಗಿತ್ತು.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಧುನ್ವಾರ್ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ ಅವರ ಪರವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತಯಾಚನೆ ಮಾಡಿದ್ದರು. ಸಾಧುನ್ವಾರ್ ಅವರ ಎದುರು ಬಿಜೆಪಿಯಿಂದ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications