ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ; ಕೇಂದ್ರ ಸಚಿವ ಮಾಹಿತಿ
ಬೆಳಗಾವಿ, ಸೆಪ್ಟೆಂಬರ್ 7: ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡ ರೈಲು ಮಾರ್ಗ ನಿರ್ಮಾಣ ಮಾಡಲು 927.40 ಕೋಟಿ ರುಪಾಯಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಸೋಮವಾರ ಕಾಡಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬೆಳಗಾವಿ-ಧಾರವಾಡ ರೈಲು ಹಳಿಗೆ ಹಸಿರು ನಿಶಾನೆ ನೀಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ 50 ಪ್ರತಿಶತ ಜಾಗ ನೀಡಬೇಕು. ಜತೆಗೆ ಜನರು ಸಹ ಸಹಕಾರ ನೀಡುವುದು ಅಗತ್ಯವಾಗಿದೆ ಎಂದರು.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಜನರ ಬಹು ವರ್ಷಗಳ ಬೇಡಿಕೆ ಇದಾಗಿತ್ತು. 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಈಗ ಅನುಮೋದನೆ ಸಿಕ್ಕಿದ್ದು ಸಂತಸ ತಂದಿದೆ ಎಂದರು.

ಬೆಳಗಾವಿ, ದೇಸೂರು, ಎಂ.ಕೆ.ಹುಬ್ಬಳ್ಳಿ, ಹುಲಿಕಟ್ಟಿ, ಜಾಲಿಕೊಪ್ಪ, ಬೇಲೂರು ಕೈಗಾರಿಕಾ ಪ್ರದೇಶದಿಂದ ಧಾರವಾಡಕ್ಕೆ ತಲುಪುತ್ತದೆ. ಒಂದು ಗಂಟೆಯಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡಕ್ಕೆ ತಲುಪುವ ವ್ಯವಸ್ಥೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಬೆಳಗಾವಿ, ಹುಬ್ಬಳ್ಳಿ ಜನತೆಯ ಪರವಾಗಿ ವಿಶೇಷವಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಸುರೇಶ್ ಅಂಗಡಿ ಹೇಳಿದರು.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications