ಕೇಳಿದ ಅರ್ಧದಷ್ಟೂ ಬರ ಪರಿಹಾರ ಕೊಟ್ಟಿಲ್ಲ ಕೇಂದ್ರ: ದೇಶಪಾಂಡೆ ಬೇಸರ
ಬೆಳಗಾವಿ, ಜನವರಿ 29: ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕೇಳಿದ್ದು 2432 ಕೋಟಿ ಆದರೆ ಸಿಕ್ಕಿರಿವುದು 949 ಕೋಟಿ ಎಂದರು.
'ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಅಲ್ಲದೆ, ವಾಸ್ತವವಾಗಿ 16,600 ಕೋಟಿ ರೂ.ಗಳಿಗಿಂತಲೂ ಹೆಚ್ಚು ನಷ್ಟವಾಗಿದೆ. ಅದರಂತೆ, ಕೇಂದ್ರದ ಮಾನದಂಡಗಳ ಪ್ರಕಾರವೇ ರಾಜ್ಯ ಸರಕಾರವು 2,434 ಕೋಟಿ ರೂ. ಪರಿಹಾರ ನೀಡುವಂತೆ 2018ರ ಅಕ್ಟೋಬರ್ 29ರಂದು ಮನವಿ ಸಲ್ಲಿಸಿತ್ತು. ಆದರೆ ಈಗ ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿರುವುದು ಸಮಾಧಾನ ತಂದಿಲ್ಲ' ಎಂದಿದ್ದಾರೆ.

'ರಾಜ್ಯವು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಇನ್ನೊಂದೆಡೆ, ರಾಜ್ಯದಲ್ಲಿ ಹಿಂಗಾರು ಮಳೆಯೂ ಕೈಕೊಟ್ಟಿದ್ದು ಈ ಅವಧಿಗೆ ಅನ್ವಯವಾಗುವಂತೆ 156 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದ್ದರಿಂದ ಕೇಂದ್ರ ಸರಕಾರವು ರಾಜ್ಯಕ್ಕೆ ಇನ್ನೂ ಹೆಚ್ಚಿನ ನೆರವು ನೀಡಬೇಕು,'' ಎಂದು ದೇಶಪಾಂಡೆ ಆಗ್ರಹಿಸಿದ್ದಾರೆ.
'ರಾಜ್ಯದ ಅನೇಕ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತಲೆದೋರಿದ್ದು, ಜನರು ಗುಳೆ ಹೋಗದಂತೆ ತಡೆಯಲು ಉದ್ಯೋಗ ಸೃಷ್ಟಿ ಮಾಡಬೇಕಾದ ಜರೂರೂ ಎದುರಾಗಿದೆ. ಅಲ್ಲದೇ, ರಾಜ್ಯದ ಜನ ತೀವ್ರ ಬರಗಾಲದಿಂದ ಕಂಗೆಟ್ಟಿದ್ದಾರೆ. ಇದನ್ನು ಎದುರಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಆದರೆ, ಭೀಕರ ಬರಗಾಲವನ್ನು ಎದುರಿಸಲು ಕೇಂದ್ರದ ನೆರವು ಕೂಡ ಅಗತ್ಯ ಪ್ರಮಾಣದಲ್ಲಿ ಬೇಕಾಗಿದೆ,'' ಎಂದು ಕಂದಾಯ ಸಚಿವರು ಹೇಳಿದ್ದಾರೆ.
ಬರ ಪರಿಸ್ಥಿತಿಯನ್ನು ನಿಭಾಯಿಸಲು ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಕೋರಿ ದೇಶಪಾಂಡೆಯವರು ಈ ತಿಂಗಳ 10ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಅಲ್ಲದೆ, ಹಿಂಗಾರು ಹಂಗಾಮಿನಲ್ಲಿ ತಲೆದೋರಿದ ಭೀಕರ ಬರಗಾಲದಿಂದಾದ ನಷ್ಟವನ್ನು ಅಂದಾಜಿಸಿ ಕೇಂದ್ರಕ್ಕೆ ಸಲ್ಲಿಸಲು ಮೆಮೊರಾಂಡಮ್ ಸಿದ್ಧಪಡಿಸುತ್ತಿದ್ದು, ಸದ್ಯದಲ್ಲೇ ಕೇಂದ್ರಕ್ಕೆ ವಿವರವಾದ ವರದಿ ಸಲ್ಲಿಸಲಾಗುವುದೆಂದೂ ಸಚಿವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications