ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿದ್ದೇವೆ : ಮಹದೇವಪ್ಪ
ಬೆಳಗಾವಿ, ನ.14-ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಸರಿಯಾಗಿ ಬಳಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಲೋಕೋಪಯೋಗಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಅವರು 'ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸದೆ ಪೋಲು ಮಾಡಲಾಗಿದೆ' ಎಂಬ ಆರೋಪಕ್ಕೆ ಉತ್ತರಿಸಿದ ಮಹದೇವಪ್ಪ 'ನಮ್ಮ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಯಾವುದೆ ತಾರತಮ್ಯ ಮಾಡದೆ ಯೋಜನೆಗಳನ್ನು ಅನುಷ್ಠಾನ ಮಾಡಿದೆ, ನಮ್ಮ ಸಸಮಯ ಅನುಷ್ಠಾನದ ಬಗ್ಗೆ ಕೇಂದ್ರದಿಂದಲೂ ಪ್ರಶಂಸೆ ವ್ಯಕ್ತವಾಗಿದೆ' ಎಂದು ಹೇಳಿದರು.

ಅಂಕಿ-ಅಂಶ ಸಮೇತ ಶೆಟ್ಟರ್ ಅವರ ಆರೋಪಕ್ಕೆ ಉತ್ತರ ನೀಡಿದ ಮಹದೇವಪ್ಪ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಗಳಲ್ಲಿನ ರಸ್ತೆ ಅಭಿವೃದ್ಧಿಗೆ 2016-17ನೆ ಸಾಲಿನಲ್ಲಿ 5 ಕೋಟಿ, 2017-18ರಲ್ಲಿ ಪುನಃ 5 ಕೋಟಿ ಅನುದಾನ ನೀಡಲಾಗಿದೆ. 2016-17ರಲ್ಲಿ 27 ಕಾಮಗಾರಿಗಳು ಮಂಜೂರಾಗಿದ್ದವು ಇದರಲ್ಲಿ 16 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದರೆ, 12 ಕಾಮಗಾರಿಗಳು ಮಾತ್ರ ಬಾಕಿ ಇವೆ ಎಂದರು.
2017-18ರಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ 2 ಕಾಮಗಾರಿಗಳು ಮುಂಜೂರಾಗಿವೆ. ಇದಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಮಾಹಿತಿ ನೀಡಿದರು. 'ಈಗಿನ ಕೇಂದ್ರ ಸರ್ಕಾರ ಯೋಜನೆಗಳಿಗೆ ಸಾಕಷ್ಟು ಹಣ ನೀಡಿದೆ. ಹಿಂದಿನ ಯುಪಿಎ ಸರ್ಕಾರವೂ ಬಹಳಷ್ಟು ಅನುದಾನ ನೀಡಿತ್ತು ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ಸದನಕ್ಕೆ ಸ್ಪಷ್ಟನೆ ನೀಡಿದರು.
ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಲ್ಲ ಎಂಬುದು ಬಿ.ಜೆ.ಪಿಯ ಹಳೆಯ ವಾದ, ಮೊನ್ನೆ ಪರಿವರ್ತನಾ ರ್ಯಾಲಿ ಉದ್ಘಾಟನೆ ಸಮಯದಲ್ಲಿ ಅಮಿತ್ ಷಾ ಅವರು ಕೂಡ ತಮ್ಮ ಭಾಷಣದಲ್ಲಿ ಈ ವಿಷಯವಾಗಿ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದರು. ಆದರೆ ಈಗ ಸಚಿವ ಮಹದೇವಪ್ಪ ಅವರು ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿದ್ದೇವೆ ಎಂದಿದ್ದಾರೆ. ಹಾಗಾದರೆ ಯಾರು ಸುಳ್ಳು ಹೇಳುತ್ತಿದ್ದಾರೆ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಮೂಡಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications