ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿದ್ದೇವೆ : ಮಹದೇವಪ್ಪ
ಬೆಳಗಾವಿ, ನ.14-ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಸರಿಯಾಗಿ ಬಳಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಲೋಕೋಪಯೋಗಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಅವರು 'ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸದೆ ಪೋಲು ಮಾಡಲಾಗಿದೆ' ಎಂಬ ಆರೋಪಕ್ಕೆ ಉತ್ತರಿಸಿದ ಮಹದೇವಪ್ಪ 'ನಮ್ಮ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಯಾವುದೆ ತಾರತಮ್ಯ ಮಾಡದೆ ಯೋಜನೆಗಳನ್ನು ಅನುಷ್ಠಾನ ಮಾಡಿದೆ, ನಮ್ಮ ಸಸಮಯ ಅನುಷ್ಠಾನದ ಬಗ್ಗೆ ಕೇಂದ್ರದಿಂದಲೂ ಪ್ರಶಂಸೆ ವ್ಯಕ್ತವಾಗಿದೆ' ಎಂದು ಹೇಳಿದರು.

ಅಂಕಿ-ಅಂಶ ಸಮೇತ ಶೆಟ್ಟರ್ ಅವರ ಆರೋಪಕ್ಕೆ ಉತ್ತರ ನೀಡಿದ ಮಹದೇವಪ್ಪ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಗಳಲ್ಲಿನ ರಸ್ತೆ ಅಭಿವೃದ್ಧಿಗೆ 2016-17ನೆ ಸಾಲಿನಲ್ಲಿ 5 ಕೋಟಿ, 2017-18ರಲ್ಲಿ ಪುನಃ 5 ಕೋಟಿ ಅನುದಾನ ನೀಡಲಾಗಿದೆ. 2016-17ರಲ್ಲಿ 27 ಕಾಮಗಾರಿಗಳು ಮಂಜೂರಾಗಿದ್ದವು ಇದರಲ್ಲಿ 16 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದರೆ, 12 ಕಾಮಗಾರಿಗಳು ಮಾತ್ರ ಬಾಕಿ ಇವೆ ಎಂದರು.
2017-18ರಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ 2 ಕಾಮಗಾರಿಗಳು ಮುಂಜೂರಾಗಿವೆ. ಇದಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಮಾಹಿತಿ ನೀಡಿದರು. 'ಈಗಿನ ಕೇಂದ್ರ ಸರ್ಕಾರ ಯೋಜನೆಗಳಿಗೆ ಸಾಕಷ್ಟು ಹಣ ನೀಡಿದೆ. ಹಿಂದಿನ ಯುಪಿಎ ಸರ್ಕಾರವೂ ಬಹಳಷ್ಟು ಅನುದಾನ ನೀಡಿತ್ತು ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ಸದನಕ್ಕೆ ಸ್ಪಷ್ಟನೆ ನೀಡಿದರು.
ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಲ್ಲ ಎಂಬುದು ಬಿ.ಜೆ.ಪಿಯ ಹಳೆಯ ವಾದ, ಮೊನ್ನೆ ಪರಿವರ್ತನಾ ರ್ಯಾಲಿ ಉದ್ಘಾಟನೆ ಸಮಯದಲ್ಲಿ ಅಮಿತ್ ಷಾ ಅವರು ಕೂಡ ತಮ್ಮ ಭಾಷಣದಲ್ಲಿ ಈ ವಿಷಯವಾಗಿ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದರು. ಆದರೆ ಈಗ ಸಚಿವ ಮಹದೇವಪ್ಪ ಅವರು ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿದ್ದೇವೆ ಎಂದಿದ್ದಾರೆ. ಹಾಗಾದರೆ ಯಾರು ಸುಳ್ಳು ಹೇಳುತ್ತಿದ್ದಾರೆ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಮೂಡಿದೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ











Click it and Unblock the Notifications