ಹೈದರಾಬಾದ್ ಕರ್ನಾಟಕ ಭಾಗದ ಶಾಸಕರ ಸಭೆ ಕರೆದ ಕುಮಾರಸ್ವಾಮಿ
ಬೆಳಗಾವಿ, ಡಿಸೆಂಬರ್ 12: ಸಿಎಂ ಕುಮಾರ ಸ್ವಾಮಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಬುಧವಾರ ಸಂಜೆ 6 ಗಂಟೆಗೆ ಹೈದರಾಬಾದ್ ಕರ್ನಾಟಕ ಭಾಗದ ಶಾಸಕರ ಸಭೆ ಕರೆದಿದ್ದಾರೆ.
ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಬಜೆಟ್ ಘೋಷಣೆಯ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಕೊಕ್ಕೆ ಹಾಕಿರುವುದರಿಂದ ಶಾಸಕರು ಆಕ್ರೋಶಗೊಂಡಿದ್ದು, ಸುಮಾರು 500 ಕೋಟಿ ರೂ.ನ್ನು ಸರಕಾರ ಬಾಕಿ ಉಳಿಸಿಕೊಂಡಿದೆ.
2017-18ನೇ ಸಾಲಿನ ಬಜೆಟ್ ನಲ್ಲಿ ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿಗೆ ರಾಜ್ಯ ಸರಕಾರ 1500 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಗದಿ ಮಾಡಿದ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡಿಲ್ಲ ಎಂಬ ಕಾರಣ ನೀಡಿ 500 ಕೋಟಿ ರೂ. ಬಿಡುಗಡೆಗೆ ಹಣಕಾಸು ಇಲಾಖೆ ತಡೆ ನೀಡಿದೆ. 1000 ಕೋಟಿ ರೂ.ನ್ನು ಮಾತ್ರ ಬಿಡುಗಡೆ ಮಾಡಿದೆ.

ಇದರಿಂದ ಶಾಸಕರು ಅಸಮಧಾನಗೊಂಡಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಗುಲ್ಬರ್ಗ ಜಿಲ್ಲೆಯ ಶಾಸಕರು ಪಕ್ಷ ಭೇದ ಮರೆತು ಒಂದಾಗಿದ್ದಾರೆ.
ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ನಿನ್ನೆ ಮಂಗಳವಾರ (ಡಿಸೆಂಬರ್ 11)ಶಾಸಕರು ಸಭೆಯನ್ನು ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಭೆ ಕರೆದು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಕುಮಾರ ಸ್ವಾಮಿ ಪ್ರಯತ್ನ ನಡೆಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications