Chikkodi Lok Sabha Election 2024 Results: ಚಿಕ್ಕೋಡಿಯಲ್ಲಿ ಯಾರ ಪಾಲಾಗಲಿದೆ ಗೆಲುವಿನ ಪಟ್ಟ?
ಚಿಕ್ಕೋಡಿ, ಮೇ 27: ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಭಾರಿ ಎರಡು ಪ್ರಮುಖ ಪಕ್ಷಗಳು ತೀವ್ರ ಪೈಪೋಟಿ ಒಡ್ಡಿದವು. ಮೇ 7ರಂದು ಚುನಾವಣೆ ನಡೆದಿದ್ದು, ಬರೋಬ್ಬರಿ ಈ ಕ್ಷೇತ್ರವೊಂದರಲ್ಲೇ ಶೇಕಡಾ 78.66 ರಷ್ಟು ಮತದಾನ ಆಗಿದೆ. ಹಾಗಾದರೆ ಈ ಬಾರಿ ಗೆಲುವು ಯಾರಿಗೆ? ಕಾಂಗ್ರೆಸ್-ಬಿಜೆಪಿಗೆ ಇರುವ ಪೂರಕ ಅಂಶಗಳ ಏನು?.
ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್ನಿಂದ ಕರ್ನಾಟಕದ ಹಾಲಿ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಕಣಕ್ಕಿಳಿದಿದ್ದರು.

ಬಿಜೆಪಿಗೆ ಚಿಕ್ಕೋಡಿ ಗೆಲುವಿನ ಲೋಕಸಭಾ ಕ್ಷೇತ್ರವಾದರೂ ಸಹಿತ ಈ ಭಾರಿ ಪಕ್ಷವು ಎದುರಾಳಿಯಿಂದ ತೀವ್ರ ಪೈಪೋಟಿ ಎದುರಿಸಿದೆ. ಇಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಗೆದ್ದಿದೆ. ಅಂದಮೇಲೆ ಕಾಂಗ್ರೆಸ್ಗೆ ಲೋಕಸಭಾ ಅಭ್ಯರ್ಥಿಗಳಿಗೆ ಹೆಚ್ಚಿನ ಬೆಂಬಲ ಸಿಕ್ಕಂತಾಯಿತು.
ಟಿಕೆಟ್ ಪಡೆಯಲು ಲಾಭಿ: ಒಮ್ಮತ ತೀರ್ಮಾನ
ಅಲ್ಲದೇ ಪ್ರತಿ ಭಾರಿ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ಗಾಗಿ ಭಾರೀ ಲಾಭಿ ನಡೆಯುತ್ತದೆ. ಇದು ಸ್ಥಳಿಯ ಕಾರ್ಯಕರ್ತರ ಮೇಲೆ ಪ್ರಭಾವ ಬೀರುತ್ತದೆ. ಎರಡು ಭಾರಿ ಗೆಲುವು ಸಾಧಿಸಿದ್ದ ರಮೇಶ್ ಕತ್ತಿ ಅವರು ಈ ಸಲದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಟಿಕೆಟ್ ಪಡೆದ ಅಣ್ಣಾ ಸಾಹೇಬ್ ಜೊಲ್ಲೆ ಕಣಕ್ಕಿಳಿದರು. ಹೀಗಾಗಿ ಪ್ರಮುಖ ನಾಯಕರೊಬ್ಬರ ಸಕಾರಾತ್ಮಕ ಬೆಂಬಲ ಪಡೆಯುವಲ್ಲಿ ಬಿಜೆಪಿ ಅಭ್ಯರ್ಥಿ ಜೊಲ್ಲೆಗೆ ಸಾಧ್ಯವಾಗಲಿಲ್ಲ.

ಈ ಭಾಗದಲ್ಲಿ ಪ್ರಭಾವಿಗಳಾಗಿರುವ ಜಾರಕಿಹೊಳಿ ಕುಟುಂಬದ ಸತೀಶ್ ಜಾರಕಿಹೊಳಿ ಪುತ್ರಿ ಕಣಕ್ಕಿಳಿದಿದ್ದರು. ಅವರನ್ನು ಕಾಂಗ್ರೆಸ್ ಮುಖಂಡರು ಒಮ್ಮತದಿಂದ ಚುನಾವಣೆಗೆ ಆಯ್ಕೆ ಮಾಡಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಕೈ' ಅಭ್ಯರ್ಥಿಗೆ ಅನುಭವದ ಕೊರತೆ
ಹಾಲಿ ಸಚಿವರು, ಸರ್ಕಾರದ ಮುಖ್ಯಸ್ಥರು ಕೂಡಿಕೊಂಡು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಬಿಜೆಪಿ ತಂತ್ರಗಳಿಗೆ ಪ್ರತಿ ತಂತ್ರ ಹೆಣೆದಿದ್ದರು. ಆದರೆ ಅಭ್ಯರ್ಥಿಗೆ ರಾಜಕೀಯ ಅನುಭವದ ಕೊರತೆಯನ್ನು ಇಲ್ಲಿ ಗಮನಿಸಬಹುದು. ಬಿಜೆಪಿಯಲ್ಲಿ ಹಾಗಿಲ್ಲ, ಅಣ್ಣಾ ಸಾಹೇಬ್ ಜೊಲ್ಲೆ ಅವರು 2019ರಲ್ಲಿ ಬಹುಮತ ಪಡೆದು ಗೆದ್ದವರು. ಅನುಭವ ಇದೆ. ಪಕ್ಷ ಅಧಿಕಾರಕ್ಕೆ ತರಲು ನಿಟ್ಟಿನಲ್ಲಿ ಕ್ಷೇತ್ರದ ತುಂಬೆಲ್ಲ ಓಡಾಡಿದ್ದರು.
ಚಿಕ್ಕೋಡಿಯಲ್ಲಿ ಹೆಚ್ಚಾದ ಕುತೂಹಲ
ಭರ್ಜರಿ ಪ್ರಚಾರ, ತಂತ್ರಗಾರಿಕೆ, ಪಕ್ಷಗಳ ಪ್ರಮುಖ ನಾಯಕರ ಬೆಂಬಲ ಇವುಗಳು ಆಯಾ ಅಭ್ಯರ್ಥಿಗಳಿಗೆ ಒಂದಷ್ಟು ಮತಗಳನ್ನು ತಂದು ಕೊಡಬಹುದು. ಜಾತಿ ವಿಚಾರವಾಗಿ ಅಭ್ಯರ್ಥಿಗಳಿಗೆ ಹೆಚ್ಚಿನ ಮತಗಳು ಬರಬಹುದು ಎನ್ನಲಾಗಿದೆ. ಏನಿದ್ದರು ಕೊನೆಗೆ ಮತದಾರರ ತೀರ್ಮಾನವೇ ಅಂತಿಮವಾಗಿದೆ. ಒಂದು ಆಯಾಮದಲ್ಲಿ ನೋಡಿದರೆ ಈ ಬಾರಿ ಚಿಕ್ಕೋಡಿಯ ಸ್ಪರ್ಧೆ, ಪೈಪೋಟಿ ಸಮಬಲದಿಂದ ಕೂಡಿದೆ ಅಂತಲೂ ಹೇಳಲಾಗುತ್ತಿದೆ. ಜೂನ್ 4ರಂದು ಫಲಿತಾಂಶದ ದಿನವೇ ಗೆಲುವಿನ ಗುಟ್ಟು ರಟ್ಟಾಗಲಿದೆ.
ಹಿಂದಿನ ಚುನಾವಣೆಗಳ ಗೆಲುವು-ಸೋಲಿನ ಮಾಹಿತಿ
2014ರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4.74ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು. ಈ ವೇಳೆ ಬಿಜೆಪಿಯ ರಮೇಶ್ ಕತ್ತಿ ಕಡಿಮೆ ಅಂತರದಿಂದ ಸೋತಿದ್ದರು.
ನಂತರ 2019ರಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ ಸೋಲಿಸಿ ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಅವರು 7.45ಲಕ್ಷ ಬಹುಮತ ಗಳಿಸಿ ವಿಜಯಸಾಧಿಸಿದ್ದರು. ನಂತರ ಈ ಬಾರಿಯು ಅಣ್ಣಾಸಾಹೇಬ್ ಜೊಲ್ಲೆ ಅವರೇ ಕಣ್ಣಕಿಳಿದಿದ್ದು, ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications