ಮಳೆ ಕೊರತೆಯಿಂದಾಗಿ ಕರ್ನಾಟಕದ ಈ ಭಾಗದಲ್ಲಿ ಮೋಡ ಬಿತ್ತನೆ ಆರಂಭ, ವಿವರ ತಿಳಿಯಿರಿ
ಬೆಳಗಾವಿ, ಸೆಪ್ಟೆಂಬರ್ 30: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ನೀರಿನ ಅಭಾವ ಸೃಷ್ಟಿಯಾಗುತ್ತಿದ್ದು, ಇದಕ್ಕಾಗಿ ಮಳೆ ಸುರಿಸಲು ಬೆಳಗಾವಿಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಗೊಂಡಿದೆ.
ತೀವ್ರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಜಿಲ್ಲೆಯ ರೈತರಿಗೆ ನೆರವಾಗಲು ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಶುಕ್ರವಾರ ಮೋಡ ಬಿತ್ತನೆ ಕಾರ್ಯನ್ನು ನಡೆಸಿದೆ. ಇದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ ಕಾರ್ಖಾನೆಯಾಗಿದೆ ಎನ್ನಲಾಗಿದೆ.

ಬೆಳಗಾವಿ ಶುಗರ್ಸ್ ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲ್ವಿಚಾರಣೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 3 ದಿನಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಮೋಡ ಬಿತ್ತನೆಗೆ ಮುಂದಾಗಲು ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯಲು 20 ದಿನಗಳನ್ನು ತೆಗೆದುಕೊಂಡಿದ್ದೇನೆ ಎಂದು ಸತೀಶ್ ಹೇಳಿದರು.
ಶುಕ್ರವಾರ ಬೆಳಗಾವಿಯ ಗೋಕಾಕ್ ಮತ್ತು ಖಾನಾಪುರ ವಲಯದ ಆಕಾಶದಲ್ಲಿ ಮೋಡ ಬಿತ್ತನೆ ಕಾರ್ಯಾಚರಣೆ ನಡೆಸಲಾಗಿದ್ದು, ವಾರಾಂತ್ಯದಲ್ಲಿ ಜಿಲ್ಲೆಯ ಇತರ ಭಾಗಗಳಲ್ಲಿ ನಡೆಯಲಿದೆ. ಮೋಡ ಬಿತ್ತನೆ ಪ್ರತಿದಿನ ಮೂರು ಗಂಟೆಗಳ ಕಾಲ ನಡೆಯಲಿದೆ. ಮೋಡ ಬಿತ್ತನೆ ನಂತರ ಬೆಳಗಾವಿ ಜಿಲ್ಲೆಯ ಒಣ ಪ್ರದೇಶಗಳಲ್ಲಿ ಮಳೆಯಾದರೆ ಉತ್ತಮ ಎಂದು ಸತೀಶ್ ಹೇಳಿದರು.
ಈ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾದರೆ ಹಾಗೂ ಸರ್ಕಾರದಿಂದ ಅನುಮೋದನೆ ದೊರೆತರೆ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ನಿಂದ ಕಾವೇರಿ ಜಲಾನಯನ ಪ್ರದೇಶದ ಮಡಕೇರಿ ಮತ್ತು ಹಾಸನದಂತಹ ಪ್ರದೇಶಗಳಲ್ಲಿ ಮೋಡ ಬಿತ್ತನೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ಮೋಡ ಬಿತ್ತನೆ ಮಾಡಿದ ಪರಿಣಾಮ 5 ರಿಂದ 30 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದರು. ಈ ವಿಮಾನವನ್ನು ಕ್ಯಾಪ್ಟನ್ ವೀರೇಂದ್ರ ಸಿಂಗ್ ಮತ್ತು ಕ್ಯಾಪ್ಟನ್ ಆದರ್ಶ್ ಪಾಂಡೆ ಪೈಲಟ್ ಮಾಡಿದ್ದಾರೆ. ಕಡಿಮೆ ಎತ್ತರದಲ್ಲಿರುವ ಮೋಡಗಳನ್ನು ಬಿತ್ತನೆ ಮಾಡಲು ಸಿಎಸಿಎಲ್-2 ಅಯೋಡೈಡ್ ಅನ್ನು ಸಿಂಪಡಿಸಲಾಗುತ್ತದೆ. 20,000 ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಎತ್ತರದಲ್ಲಿರುವ ಮೋಡಗಳಿಗೆ ಸಿಲ್ವರ್ ಅಯೋಡೈಡ್ ಅನ್ನು ಸಿಂಪಡಿಸಲಾಗುತ್ತದೆ.
ಇದೇ ಸೆಪ್ಟೆಂಬರ್ 4ರಂದು ರಾಜ್ಯದಲ್ಲಿ ಬರಗಾಲದ ಛಾಯೆ ಹಿನ್ನಲೆಯಲ್ಲಿ ಪಿಕೆಕೆ (ಪಕ್ಷಾತೀತ ಕಾಯಕ ಕನಸು) ಸಂಸ್ಥೆಯ ವತಿಯಿಂದ ಶಾಸಕ ಪ್ರಕಾಶ ಕೋಳಿವಾಡ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕಾರ್ಯ ಮಾಡಿಸಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications