ಕೆ.ಪಿ.ಎಂ.ಇ ಬಗ್ಗೆ ವೈದ್ಯರ ಸಲಹೆ ಪಡೆದು ನಿರ್ಧಾರ : ಸಿ.ಎಂ
ಬೆಳಗಾವಿ, ನವೆಂಬರ್ 14 : ವೈದ್ಯಕೀಯ ನಿಯಂತ್ರಣ ವಿಧೇಯಕದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರಿಗೆ ಅಲ್ಪ ಸಮಾಧಾನ ದೊರೆತಿದೆ. ವೈದ್ಯರ ಸಲಹೆ ನಂತರವಷ್ಟೆ ವಿಧೇಯಕ ಮಂಡಿಸುವುದಾಗಿ ಹೇಳಿದ್ದಾರೆ.
ಇಂದು (ನವೆಂಬರ್ 14) ಬೆಳಿಗ್ಗೆ ಕೂಡ ಮುಷ್ಕರಾ ನಿರತ ವೈದ್ಯರೊಂದಿಗೆ ಮಾತನಾಡಿದ ಸಿ.ಎಂ ವಿಧೇಯಕವೇನೊ ಒಂದು ದಿನದಲ್ಲಿ ಮುಗಿಯುತ್ತೆ ಎಂದುಕೊಂಡಿದ್ದೀರಾ. ನಾನು ಸಚಿವ ರಮೇಶ್ ಕುಮಾರ್ ಮತ್ತು ವಿಧೇಯಕದ ಜಂಟಿ ಪರಿಶೀಲನಾ ಸಮಿತಿಯೊಂದಿಗೆ ಮಾತನಾಡುತ್ತೇನೆ, ಅದೆಲ್ಲಾ ಆದ ನಂತರ ನಿಮ್ಮನ್ನೂ ಕರೆಯುತ್ತೇನೆ, ನೀವು ಸುಮ್ಮನೆ ಊಹಿಸಿಕೊಂಡು ಪರಿಶೀಲನೆ ಮಾಡುವುದು ಸರಿಯಲ್ಲ ಎಂದು ಬುದ್ಧಿವಾದ ಹೇಳಿದ್ದರು.

ಮಧ್ಯಾಹ್ನದ ವೇಳೆಗೆ ಅದೇ ಮಾತನ್ನು ಪುನರ್ ಉಚ್ಚರಿಸಿರುವ ಸಿದ್ದರಾಮಯ್ಯ ವೈದ್ಯರ ಸಲಹೆ ಪಡಿದಬಳಿಕವಷ್ಟೆ ವಿಧೇಯಕ ಮಂಡನೆ ಮಾಡುತ್ತೇವೆ ಎಂದಿದ್ದಾರೆ. ಜೊತೆಗೆ ವೈದ್ಯರು ಮತ್ತೆ ಕರ್ತವ್ಯಕ್ಕೆ ತೆರಳಲಿ ಎಂದು ಅವರು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳು ನಿನ್ನೆ (ನವೆಂಬರ್ 14) ರಂದು ಕೂಡ ಮುಷ್ಕರ ನಿರತ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದರು ಆದರೆ ಆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ವೈದ್ಯರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಇದೀಗ ಮುಖ್ಯಮಂತ್ರಿಗಳು ವೈದ್ಯರ ಸಲಹೆ ಪಡೆದ ಬಳಿಕವಷ್ಟೆ ವಿಧೇಯಕ ಮಂಡಿಸುವುದಾಗಿ ಹೇಳಿರುವುದು ವೈದ್ಯರಲ್ಲಿ ಆಶಾಭಾವ ಮೂಡಿಸಿ ಅವರು ಮತ್ತೆ ಕರ್ತವ್ಯಕ್ಕೆ ಮರಳುತ್ತಾರೆಯೆ ಕಾದು ನೋಡಬೇಕು. ಈ ಮಧ್ಯೆ ಸೂಕ್ತ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ತಲುಪಿದ್ದು ವೈದ್ಯರು ಬೇಗ ಕರ್ತವ್ಯಕ್ಕೆ ಮರಳಲಿ ಎಂದು ರಾಜ್ಯದ ಜನ ಆಶಯಿಸುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications