ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣದ ಭರವಸೆ ಕೊಟ್ಟ ಸಿಎಂ
ಬೆಳಗಾವಿ, ಅಕ್ಟೋಬರ್ 7: ಕೊರೊನಾ ಸೋಂಕಿನಿಂದ ಇತ್ತೀಚೆಗೆ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಮನೆಗೆ ಇಂದು ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ ನಡವಳಿಕೆಯನ್ನು ಸ್ಮರಿಸಿದರು. ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ ಅವರ ಕೈಹಿಡಿದು ಕೆಲಹೊತ್ತು ಭಾವುಕರಾದ ಮುಖ್ಯಮಂತ್ರಿಗಳು, ಧೈರ್ಯದಿಂದ ಇರುವಂತೆ ಸಾಂತ್ವನ ಹೇಳಿದರು. ಸಾವಿಗೆ ದುಃಖ ವ್ಯಕ್ತಪಡಿಸಿದ ಅವರು, ಸುರೇಶ್ ಅಂಗಡಿ ಅವರು ಆಸ್ಪತ್ರೆಯಲ್ಲಿ ಇದ್ದಾಗ ಆರೋಗ್ಯವಾಗಿ ಇದ್ದೀನಿ ಎಂದು ತಿಳಿಸಿದ್ದನ್ನು ನೆನಪಿಸಿಕೊಂಡರು.
ದೆಹಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಸೂಚನೆ: ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸುರೇಶ್ ಅಂಗಡಿ ಅವರ ಸಂಬಂಧಿಕರೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ ಬಹುತೇಕ ಯೋಜನೆಗಳಿಗೆ ಅಂಗಡಿ ಅವರು ಚಾಲನೆ ನೀಡಿದ್ದರು ಎಂದು ನೆನಪಿಸಿಕೊಂಡರು.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಮರಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೂಡ ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪತ್ನಿ ಮಂಗಲಾ ಸುರೇಶ್ ಅಂಗಡಿ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಇದ್ದರು. ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications