ಚಿಕ್ಕೋಡಿ ಉಪ ಚುನಾವಣೆ : ಗಣೇಶ್ ಹುಕ್ಕೇರಿ ಅಭ್ಯರ್ಥಿ
ಬೆಳಗಾವಿ, ಜು. 28 : ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರುತ್ತಿದೆ. ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಪ್ರಕಾಶ್ ಹುಕ್ಕೇರಿ ಅವರ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರನ್ನು ವೀಕ್ಷಕರು ಅಂತಿಮಗೊಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಭಾನುವಾರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚುನಾವಣಾ ವೀಕ್ಷಕ ಮತ್ತು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣೇಶ್ ಹುಕ್ಕೇರಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅವರಿಗೆ ಬಿ ಫಾರಂ ನೀಡುವಂತೆ ಎಐಸಿಸಿ ಮತ್ತು ಕೆಪಿಸಿಸಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುದರ್ಶನ್ ಹೇಳಿದರು.

ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ನೇಮಿಸಿದ ವೀಕ್ಷಕರಾದ ವಿ.ಆರ್.ಸುದರ್ಶನ್, ಎಸ್.ಜಿ. ನಂಜಯ್ಯನಮಠ, ರಿಜ್ವಾನ್ ಅರ್ಷದ್ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಿದರು. [ಉಪ ಚುನಾವಣೆ, ಶಾಸಕರೊಂದಿಗೆ ಸಿಎಂ ಸಿದ್ದು ಸಭೆ]
ಈ ಸಭೆಯಲ್ಲಿ ಎಲ್ಲರೂ ಸಂಸದ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಪ್ರಕಾಶ ಹುಕ್ಕೇರಿ ಅವರ ಹೆಸರನ್ನು ಸರ್ವಾನುಮತದಿಂದ ಅಂತಿಮಗೊಳಿಸಿದರು. ಆದ್ದರಿಂದ ವೀಕ್ಷಕರ ತಂಡವು ಗಣೇಶ ಹುಕ್ಕೇರಿ ಅವರಿಗೆ ಚುನಾವಣಾ 'ಬಿ' ಫಾರಂ ನೀಡುವಂತೆ ಎಐಸಿಸಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಶಿಫಾರಸು ಮಾಡಲಿದೆ.[ಉಪ ಚುನಾವಣೆ ವೇಳಾಪಟ್ಟಿ]
ಸಂಸದರಾಗಿ ಆಯ್ಕೆಯಾದ ಸಚಿವ ಪ್ರಕಾಶ್ ಹುಕ್ಕೇರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಆ.21ರಂದು ಉಪ ಚುನಾವಣೆ ನಡೆಯಲಿದೆ. ಗಣೇಶ್ ಹುಕ್ಕೇರಿ ಅವರ ಹೆಸರನ್ನು ಹೈ ಕಮಾಂಡ್ ಅಂತಿಮಗೊಳಿಸಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications