ಚಿಕ್ಕೋಡಿ ಉಪ ಚುನಾವಣೆ : ಗಣೇಶ್ ಹುಕ್ಕೇರಿ ಅಭ್ಯರ್ಥಿ
ಬೆಳಗಾವಿ, ಜು. 28 : ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರುತ್ತಿದೆ. ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಪ್ರಕಾಶ್ ಹುಕ್ಕೇರಿ ಅವರ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರನ್ನು ವೀಕ್ಷಕರು ಅಂತಿಮಗೊಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಭಾನುವಾರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚುನಾವಣಾ ವೀಕ್ಷಕ ಮತ್ತು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣೇಶ್ ಹುಕ್ಕೇರಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅವರಿಗೆ ಬಿ ಫಾರಂ ನೀಡುವಂತೆ ಎಐಸಿಸಿ ಮತ್ತು ಕೆಪಿಸಿಸಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುದರ್ಶನ್ ಹೇಳಿದರು.

ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ನೇಮಿಸಿದ ವೀಕ್ಷಕರಾದ ವಿ.ಆರ್.ಸುದರ್ಶನ್, ಎಸ್.ಜಿ. ನಂಜಯ್ಯನಮಠ, ರಿಜ್ವಾನ್ ಅರ್ಷದ್ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಿದರು. [ಉಪ ಚುನಾವಣೆ, ಶಾಸಕರೊಂದಿಗೆ ಸಿಎಂ ಸಿದ್ದು ಸಭೆ]
ಈ ಸಭೆಯಲ್ಲಿ ಎಲ್ಲರೂ ಸಂಸದ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಪ್ರಕಾಶ ಹುಕ್ಕೇರಿ ಅವರ ಹೆಸರನ್ನು ಸರ್ವಾನುಮತದಿಂದ ಅಂತಿಮಗೊಳಿಸಿದರು. ಆದ್ದರಿಂದ ವೀಕ್ಷಕರ ತಂಡವು ಗಣೇಶ ಹುಕ್ಕೇರಿ ಅವರಿಗೆ ಚುನಾವಣಾ 'ಬಿ' ಫಾರಂ ನೀಡುವಂತೆ ಎಐಸಿಸಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಶಿಫಾರಸು ಮಾಡಲಿದೆ.[ಉಪ ಚುನಾವಣೆ ವೇಳಾಪಟ್ಟಿ]
ಸಂಸದರಾಗಿ ಆಯ್ಕೆಯಾದ ಸಚಿವ ಪ್ರಕಾಶ್ ಹುಕ್ಕೇರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಆ.21ರಂದು ಉಪ ಚುನಾವಣೆ ನಡೆಯಲಿದೆ. ಗಣೇಶ್ ಹುಕ್ಕೇರಿ ಅವರ ಹೆಸರನ್ನು ಹೈ ಕಮಾಂಡ್ ಅಂತಿಮಗೊಳಿಸಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications