ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಮುಖ್ಯಾಂಶಗಳು
ಬೆಳಗಾವಿ, ಡಿಸೆಂಬರ್ 18: ಮುಂದೂಡುತ್ತಾ ಬರಲಾಗುತ್ತಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಬೆಳಗಾವಿಯಲ್ಲಿ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಗೃಹ ಮಂತ್ರಿ ಪರಮೇಶ್ವರ್, ಡಿ.ಕೆ.ಶಿವಕುಮಾರ್ ಅವರುಗಳ ನೇತೃತ್ವದಲ್ಲಿ ಶಾಸಕಾಂಗ ಸಭೆಯು ಇಂದು ನಡೆಯಿತು.
ಸಂಪುಟ ವಿಸ್ತರಣೆಗೆ ಮುನ್ನಾ ಕರೆಯಲಾಗಿರುವ ಈ ಶಾಸಕಾಂಗ ಪಕ್ಷದ ಸಭೆ ಹಲವು ಕಾರಣಗಳಿಗೆ ಭಾರಿ ಮಹತ್ವದ್ದಾಗಿತ್ತು. ಸಚಿವ ಸ್ಥಾನ ಆಕಾಂಕ್ಷಿಗಳು ಮುಖಂಡರ ಮೇಲೆ ಬಂಡಾಯ ಏಳುವ ನಿರೀಕ್ಷೆ ಸಹ ಇತ್ತು.
ನಿರೀಕ್ಷೆಯಂತೆ ರಮೇಶ್ ಜಾರಕಿಹೊಳಿ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದರು. ಜೊತೆಗೆ ಎಂಬಿ.ಪಾಟೀಲ್, ಸೇರಿ ಇನ್ನೂ ಕೆಲವು ಹಿರಿಯ ಶಾಸಕರೇ ಸಭೆಗೆ ಗೈರಾಗಿ ಕಾಂಗ್ರೆಸ್ ಮುಖಂಡರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.

'ಸಂಪುಟ ವಿಸ್ತರಣೆ ಅಲ್ಲ ಪುನರ್ ರಚನೆ'
ಡಿಸೆಂಬರ್ 22 ರಂದು ಸಚಿವ ಸಂಪುಟ ವಿಸ್ತರಣೆ ಆಗುತ್ತಿಲ್ಲ ಬದಲಿಗೆ ಸಂಪುಟ ಪುನರ್ರಚನೆ ಆಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಸಭೆಗೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಮಾತಿನ ಪ್ರಕಾರ ಈಗಿರುವ ಕೆಲವು ಸಚಿವರು ಸಹ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

ನಿಗಮ ಮಂಡಳಿ ನೇಮಕಕ್ಕೆ ಅರ್ಜಿ
ಸಭೆಯಲ್ಲಿ ನಿಗಮ ಮಂಡಳಿ ನೇಮಕಕ್ಕೆ ಸಹ ಕೆಲವು ಶಾಸಕರು ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 22 ರಂದೇ ನಿಗಮ ಮಂಡಳಿ ಸ್ಥಾನವನ್ನು ನೀಡಲಾಗುತ್ತಿದ್ದು, ಕಾಂಗ್ರೆಸ್ನ 20 ಶಾಸಕರಿಗೆ ನಿಗಮ ಮಂಡಳಿ ಸ್ಥಾನ ಸಿಗಲಿದೆ.

ಕ್ಷೇತ್ರ ಅನುದಾನದಲ್ಲಿ ತಾರತಮ್ಯ
ಇನ್ನುಳಿದಂತೆ ಕ್ಷೇತ್ರ ಅನುದಾನದ ವಿಷಯವಾಗಿ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ದೊರಕಿದಷ್ಟು ಅನುದಾನಗಳು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ದೊರಕುತ್ತಿಲ್ಲ ಎಂದು ಶಾಸಕರು ದೂರು ನೀಡಿದ್ದಾರೆ.

ಉತ್ತರ ಕರ್ನಾಟಕ ಶಾಸಕರ ಅಸಮಾಧಾನ
ಉತ್ತರ ಕರ್ನಾಟಕ ಭಾಗದ ಶಾಸಕರು ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಅಭಿವೃದ್ಧಿ ಹಾಗೂ ರಾಜಕಾರಣ ಎರಡರಲ್ಲೂ ಉತ್ತರ ಕರ್ನಾಟಕವನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅವರು ಬೇಸರ ತೋಡಿಕೊಂಡರು.

ಸಭೆಯಲ್ಲಿ ಸಿಎಂ ಭಾಗವಹಿಸಲಿಲ್ಲ
ಈ ಬಾರಿಯ ಕಾಂಗ್ರೆಸ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಭಾಗವಹಿಸುತ್ತಾರೆ ಎನ್ನಲಾಗಿತ್ತು. ಕಾಂಗ್ರೆಸ್ ಶಾಸಕರ ದೂರುಗಳನ್ನು ಸಿಎಂ ಕೇಳುತ್ತಾರೆ ಎನ್ನಲಾಗಿತ್ತು. ಆದರೆ ಹಾಗೆ ಏನೂ ನಡೆದಿಲ್ಲ. ಕಾಂಗ್ರೆಸ್ ಮುಖಂಡರೇ ಇದಕ್ಕೆ ಬೇಡ ಎಂದರು ಎನ್ನಲಾಗಿದೆ.

ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ
ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿರುವ ಬಗ್ಗೆ ಸಿದ್ದರಾಮಯ್ಯ ಸಭೆಯಲ್ಲಿ ಪ್ರಸ್ತಾಪಿಸಿ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ವಿಜಯ ಸಾಧಿಸುತ್ತದೆ ಎಂದು ಹೇಳಿದರು. ಈ ಸಮಯದಲ್ಲಿ ಯಾವುದೇ ಶಾಸಕರು ಪಕ್ಷಕ್ಕೆ ಹಾನಿಯಾಗುವ ಕೃತ್ಯಗಳಲ್ಲಿ ತೊಡಗಿಕೊಳ್ಳಬಾರದು ಎಂದು ಅವರು ಎಚ್ಚರಿಕೆಯನ್ನೂ ನೀಡಿದರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications