ಚಿಕ್ಕೋಡಿಯಿಂದ ಮೊದಲ ಭಾರಿಗೆ ಸಂಸತ್ಗೆ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಜೊಲ್ಲೆಗೆ ಮುಖಭಂಗ
ಚಿಕ್ಕೋಡಿ, ಜೂನ್ 04: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ಗೆ ಗೆಲುವು ಸಿಕ್ಕಿದೆ. ಈ ಮೂಲಕ ಕಳೆದ ಎರಡು ಬಾರಿ ಗೆದ್ದು ಬೀಗಿದ್ದ ಬಿಜೆಪಿಗೆ ಕಾಂಗ್ರೆಸ್ ಶಾಕ್ ನೀಡಿದೆ. ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ಚಿಕ್ಕೋಡಿಯಲ್ಲಿ ಪ್ರಭಾವಿ ರಾಜಕೀಯ ಕುಟುಂಬಗಳಾದ ಜಾರಕಿಹೊಳಿ ಕುಟುಂಬದ ಕುಡಿ ಈ ಬಾರಿ ಲೋಕಸಭಾ ಚುನಾವಣಾ ಕಣಕ್ಕಿಳಿದಿತ್ತು. ಬಿಜೆಪಿಯ ಹಾಲಿ ಸಂಸದ ಅಣ್ಣಸಾಹೇಬ್ ಜೊಲ್ಲೆ ವಿರುದ್ಧ ಕಾಂಗ್ರೆಸ್ನ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಭದ್ರಕೋಟೆ ಎನ್ನಲಾಗಿದ್ದ ಚಿಕ್ಕೋಡಿ ಛಿದ್ರವಾಗಿ ಕಾಂಗ್ರೆಸ್ 'ಕೈ' ವಶವಾಗಿದೆ. ಇಲ್ಲಿ ಪ್ರಿಯಾಂಕಾ ಜಾರಕಿಹೊಳಿಯವರು ಬರೋಬ್ಬರಿ 4.63 ಲಕ್ಷಕ್ಕೂ ಅಧಿಕ ಮತಗಳಿಂದ (ಮಧ್ಯಾಹ್ನ 2.30ವರೆಗಿನಗ ಎಣಿಕೆ ಪ್ರಕಾರ) ವಿಜಯ ಸಾಧಿಸಿದ್ದಾರೆ. ಇತ್ತ ಬಿಜೆಪಿಯ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು 3.81 ಲಕ್ಷ ಮತಗಳನ್ನು ಪಡೆದು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಮರುಕಳಿಸಿತು 2014ರ ಚುನಾವಣಾ ಫಲಿತಾಂಶ
2014ರಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದರು. ಅಂದು ಬಿಜೆಪಿಗೆ ಸೋಲಾಗಿತ್ತು. ಬಳಿಕ 2019ರಲ್ಲಿ ಇದೇ ಪ್ರಕಾಶ್ ಹುಕ್ಕೇರಿ ವಿರುದ್ಧ ರಮೇಶ್ ಕತ್ತಿಗೆ ಬದಲಾಗಿ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಗೆದ್ದಿತ್ತು. ಇದೀಗ ಮತ್ತೆ ಉಲ್ಟಾ ಆಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಈ ಬಾರಿಯೂ ರಮೇಶ್ ಕತ್ತಿಯವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ತಪ್ಪಿಸುವಲ್ಲಿ ಈ ಅಣ್ಣಾಸಾಹೇಬ್ ಜೊಲ್ಲೆಯವರು ಪ್ರಮುಖ ಪಾತ್ರ ವಹಿಸಿದ್ದರು. ಬಿಜೆಪಿ ಟಿಕೆಟ್ ಗಾಗಿ ಕ್ಷೇತ್ರದಲ್ಲಿ ತೀವ್ರ ಲಾಭಿ ನಡೆಸಿದ್ದರು ಎಂದು ವರದಿ ಆಗಿತ್ತು. ಕೊನೆಗೂ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಭಾವ ಹೆಚ್ಚಿದೆ ಎಂಬುದು ಸಾಬೀತಾಗಿದೆ. ಗೆಲವಿನ ಕುರಿತು ಚುನಾವಣೆ ಆಯೋಗ ಅಧಿಕೃತ ಮಾಹಿತಿ ನೀಡಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications