ಬೆಳಗಾವಿ ಜಿಲ್ಲೆಯ 13 ಕೇಂದ್ರಗಳಲ್ಲಿ ಕೊರೊನಾ ವ್ಯಾಕ್ಸಿನೇಷನ್
ಬೆಳಗಾವಿ, ಜನವರಿ 16: ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, ಕಳೆದ ಒಂದು ವರ್ಷದಿಂದ ಕೊರೊನಾ ವೈರಸ್ ಮಹಾಮಾರಿಗೆ ಸಿಕ್ಕಿ ನಲುಗಿ ಹೋಗಿದ್ದ ಭಾರತೀಯರಿಗೆ ಇಂದಿನಿಂದ ವೈರಸ್ ಭೀತಿಯಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಇಂದಿನಿಂದ (ಜ.16) ದೇಶದಾದ್ಯಂತ ಮೊದಲ ಹಂತದ ಕೊರೊನಾ ಲಸಿಕೆ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಕೊರೊನಾ ವ್ಯಾಕ್ಸಿನೇಷನ್ ಗೆ ಚಾಲನೆ ನೀಡಲಿದ್ದಾರೆ. ಅದೇ ರೀತಿ ಕರ್ನಾಟಕದ ಬೆಳಗಾವಿ ಜಿಲ್ಲೆಯ 13 ಕೇಂದ್ರಗಳಲ್ಲಿ ಶನಿವಾರ ಕೊರೊನಾ ವ್ಯಾಕ್ಸಿನೇಷನ್ ನಡೆಯಲಿದೆ. ಜಿಲ್ಲೆಗೆ ಒಟ್ಟು 35,960 ಕೋವಿಶಿಲ್ಡ್ ಲಸಿಕೆಗಳನ್ನು ವಿತರಣೆ ಮಾಡಲಾಗಿದೆ.
ಕೋವಿಶಿಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ್ದು, ಮೊದಲ ಹಂತದಲ್ಲಿ ಕೋಲ್ಡ್ ಚೈನ್ ಸೆಂಟರ್ಗಳಿಗೆ 10 ಸಾವಿರ ಲಸಿಕೆಗಳ ಪೂರೈಕೆ ಮಾಡಲಾಗಿದೆ.

ಈಗಾಗಲೇ ಲಸಿಕಾ ಕೇಂದ್ರಗಳಿಗೆ ಹತ್ತು ಸಾವಿರ ಡೋಸ್ ಲಸಿಕೆಗಳ ಪೂರೈಕೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ(ಜ.16) ರಂದು ಒಟ್ಟು 13 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ.
ಶನಿವಾರ ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ವ್ಯಾಕ್ಸಿನೇಷನ್ ಆರಂಭಗೊಳ್ಳಲಿದೆ.

ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆ, ವಂಟಮುರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಅಥಣಿ ತಾಲೂಕು ಆಸ್ಪತ್ರೆ, ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆ, ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಗೋಕಾಕ್ ಸಾರ್ವಜನಿಕ ಆಸ್ಪತ್ರೆ, ಹುಕ್ಕೇರಿ ತಾಲೂಕು ಆಸ್ಪತ್ರೆ, ಖಾನಾಪುರ ಸಾರ್ವಜನಿಕ ಆಸ್ಪತ್ರೆ, ರಾಯಬಾಗ ಸಾರ್ವಜನಿಕ ಆಸ್ಪತ್ರೆ, ರಾಮದುರ್ಗ ಸಾರ್ವಜನಿಕ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ, ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳಗಾವಿಯ ಕೆಎಲ್ಇ ಪ್ರಭಾಕರ್ ಕೋರೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಟ್ಟು 1300 ಆರೋಗ್ಯ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ನಡೆಯುತ್ತದೆ.
Recommended Video
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications