ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದರ್ಶನ್ ಸಿನಿಮಾದ ನಿರ್ಮಾಪಕ ಆನಂದ್ ಅಪ್ಪುಗೋಳ ಮತ್ತೆ ಜೈಲಿಗೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮಾರ್ಚ್ 8: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯಿಂದ ನಡೆದಿದೆ ಎನ್ನಲಾದ ಬಹುಕೋಟಿ ಠೇವಣಿ ವಂಚನೆ ಪ್ರಕರಣ ಸಂಬಂಧವಾಗಿ ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ ಮತ್ತೆ ಜೈಲು ಪಾಲಾಗಿದ್ದಾರೆ.

ಠೇವಣಿ ಹಣ ಮರಳಿಸದೆ ವಂಚಿಸಿದ ಆರೋಪದಡಿ ಆನಂದ ಅಪ್ಪುಗೋಳ, ವ್ಯವಸ್ಥಾಪಕರಾದ ಮಹಾಂತೇಶ ಅಂಗಡಿ, ಶಿವಾನಂದ ಕಲ್ಲೂರ ಅವರನ್ನು ಮಾರ್ಚ್ 7ರಂದು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಳಗಾವಿ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಸತೀಶ ಸಿಂಗ್ ಆದೇಶ ನೀಡಿದರು.

ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೊಳ್ ಬಂಧನಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೊಳ್ ಬಂಧನ

ಆನಂದ ಅಪ್ಪುಗೋಳ ಹಾಗೂ ಇಬ್ಬರು ವ್ಯವಸ್ಥಾಪಕರನ್ನು ಕೋರ್ಟ್​ನಿಂದ ನೇರವಾಗಿ ಹಿಂಡಲಗಾ ಜೈಲಿಗೆ ಕರೆದೊಯ್ಯಲಾಯಿತು. ಆನಂದ ಅಪ್ಪುಗೋಳ ಅವರಿಗೆ ಸೇರಿದ ಎರಡು ಸೊಸೈಟಿಗಳಲ್ಲಿ ನಗರದ ನಿವಾಸಿ ನಾನಾ ದೊಂಡಿಬಾ ದೇಸಾಯಿ ಎಂಬುವವರು 1.42 ಕೋಟಿ ರುಪಾಯಿ ಠೇವಣಿ ಇಟ್ಟಿದ್ದರು.

Darshan movie producer Anand Appugol again sent to jail

ಅವಧಿ ಮುಗಿದರೂ ಹಣ ಮರಳಿಸದ ಹಿನ್ನೆಲೆಯಲ್ಲಿ ನಾನಾ ದೇಸಾಯಿ ಅವರು ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ 15 ದಿನದ ಹಿಂದೆ ಈ ಮೂವರಿಗೆ ಸಮನ್ಸ್ ಜಾರಿ ಮಾಡಿತ್ತು. ಕೋರ್ಟ್​ಗೆ ಹಾಜರಾದ ಈ ಮೂವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮೂರು ತಿಂಗಳ ಹಿಂದೆ ಜಿಲ್ಲಾ ನ್ಯಾಯಾಲಯದಲ್ಲಿ ಆನಂದ ಅಪ್ಪುಗೋಳ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ, ಒಂದು ತಿಂಗಳ ಕಾಲ ಆನಂದ ಅಪ್ಪುಗೋಳ ಹಿಂಡಲಗಾ ಜೈಲಿನಲ್ಲಿದ್ದರು.

English summary
Darshan's Sangolli Rayanna movie producer Anand Appugol again sent to jail in cheating case. Belagavi district session court judge sent Anand Appugol to 14 days judicial custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X