ಡಿಸಿಎಂ ಲಕ್ಷ್ಮಣ್ ಸವದಿ ಶಸ್ತ್ರತ್ಯಾಗದ ಹಿಂದಿದೆಯಾ ಮಾಸ್ಟರ್ ಪ್ಲಾನ್?
ಬೆಳಗಾವಿ, ನವೆಂಬರ್ ೪: ಇದೇ ನ.6 ರಂದು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಡಿಸಿಎಂ ಲಕ್ಷ್ಮಣ್ ಸವದಿ ಶಸ್ತ್ರತ್ಯಾಗ ಮಾಡಿದರಾ ಎಂಬ ಅನುಮಾನ ಮೂಡಿದೆ.
ಡಿಸಿಎಂ ಲಕ್ಷ್ಮಣ್ ಸವದಿ ಶಸ್ತ್ರತ್ಯಾಗದ ಹಿಂದೆ ಯಾವುದಾದರೂ ಮಾಸ್ಟರ್ ಪ್ಲ್ಯಾನ್ ಇದೆಯೇ ಎಂದು ಬೆಳಗಾವಿ ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ ಕನಸು ಹೊತ್ತು ಸ್ಥಳೀಯ ನಾಯಕರ ಮನಗೆಲ್ಲಲು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಸ್ತ್ರತ್ಯಾಗ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರವಾಗಿ ಬೆಳಗಾವಿ ಬಿಜೆಪಿಯಲ್ಲಿ ಎರಡು ಬಣಗಳಾಗಿದ್ದವು, ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಕತ್ತಿ, ಜಾರಕಿಹೊಳಿ ಬ್ರದರ್ಸ್ ಮಧ್ಯೆ ಭಾರಿ ಪೈಪೋಟಿ ಇತ್ತು. ಈ ವೇಳೆ ನಿರ್ದೇಶಕರ ಅವಿರೋಧ ಆಯ್ಕೆಗೆ ಶ್ರಮಿಸುವಂತೆ ಆರ್ಎಸ್ಎಸ್, ಬಿಜೆಪಿ ವರಿಷ್ಠರಿಂದ ಬೆಳಗಾವಿ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದರು.

ಅವಿರೋಧ ಆಯ್ಕೆಗೆ ಶ್ರಮಿಸುತ್ತಿದ್ದಾರೆ
ಡಿಸಿಎಂ ಲಕ್ಷ್ಮಣ್ ಸವದಿ ಅವರು ಕಳೆದ ಒಂದು ವರ್ಷದಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ತಯಾರಿ ನಡೆಸಿದ್ದು, ಪಕ್ಷದ ವರಿಷ್ಠರ ಸಲಹೆ ಮೇರೆಗೆ ಎಲ್ಲರನ್ನೂ ಒಗ್ಗೂಡಿಸಿ ಅವಿರೋಧ ಆಯ್ಕೆಗೆ ಶ್ರಮಿಸುತ್ತಿದ್ದಾರೆ. ಜಾರಕಿಹೊಳಿ, ಕತ್ತಿ ಬ್ರದರ್ಸ್ ಸೇರಿ ಎಲ್ಲಾ ನಾಯಕರು ಸೇರಿ ಒಗ್ಗಟ್ಟಿನ ಜಪ ಮಾಡುತ್ತಿದ್ದು, ಸ್ವಪಕ್ಷದಲ್ಲಿರುವ ವಿರೋಧಿಗಳ ಮನಗೆಲ್ಲಲು ಸವದಿ ಹಿಂದೆ ಸರಿದರಾ ಎಂಬ ಪ್ರಶ್ನೆ ಮೂಡಿದೆ.

ತಾನೊಬ್ಬ ಪಕ್ಷ ನಿಷ್ಠ ಪ್ರಭಾವಿ ನಾಯಕ
ಎಲ್ಲರನ್ನು ಒಟ್ಟಾಗಿ, ಒಂದೇ ವೇದಿಕೆಯಲ್ಲಿ ಸೇರಿಸಿ ವರಿಷ್ಠರಿಗೆ ಸಂದೇಶ ರವಾನಿಸಿದ್ದು, ಪರೋಕ್ಷವಾಗಿ ತಾನೊಬ್ಬ ಪಕ್ಷ ನಿಷ್ಠ ಪ್ರಭಾವಿ ನಾಯಕ ಎನ್ನುವ ಸಂದೇಶ ರವಾನಿಸಿದ್ದಾರೆ. ಡಿಸಿಎಂ ಲಕ್ಷ್ಮಣ್ ಸವದಿ ಚುನಾವಣೆಯಿಂದ ಹಿಂದೆ ಸರಿದಿರುವ ಬಗ್ಗೆ ಜಿಲ್ಲಾ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಯಾಗುತ್ತಿದೆ.

ರಮೇಶ್ ವಿರುದ್ಧ ಸತೀಶ್ ಜಾರಕಿಹೊಳಿ ಆಕ್ರೋಶ
ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಯಲ್ಲಿ ಎಂಇಎಸ್ ನಾಯಕನಿಗೆ ಬಿಜೆಪಿ ಬೆಂಬಲ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಂಇಎಸ್ ರಾಜ್ಯಕ್ಕೆ ಯಾವ ರೀತಿ ಅನ್ಯಾಯ ಮಾಡಿದೆ ಅದನ್ನು ನೋಡುವ ಪ್ರಯತ್ನವನ್ನು ಸಚಿವರು ಮಾಡಲಿ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷಕ್ಕೆ ಆಹ್ವಾನಿಸುವ ಮುನ್ನ 10 ಸಾರಿ ಯೋಚನೆ
ಬೆಳಗಾವಿ ಜಿಲ್ಲೆ ಘಟಪ್ರಭಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಕರಾಳ ದಿನದಲ್ಲಿ ಭಾಗಿಯಾದವರನ್ನು ರಾಷ್ಟ್ರೀಯ ಪಕ್ಷವೊಂದು ಆಹ್ವಾನಿಸುತ್ತಿದೆ. ಎಂಇಎಸ್ ನವರು ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದಾರೆ ಎಂದು ತಿಳಿಸಿದರು. ಕರ್ನಾಟಕದ ನಿಲುವು, ಭಾಷೆ ವಿರೋಧ ಮಾಡಿಕೊಂಡು ಬಂದಿರುವವರನ್ನು ಪಕ್ಷಕ್ಕೆ ಆಹ್ವಾನಿಸುವ ಮುನ್ನ 10 ಸಾರಿ ಯೋಚನೆ ಮಾಡಬೇಕು. ಅವರ ಪಕ್ಷದ ನಿರ್ಧಾರ ನಾವು ಏನು ಹೇಳಕ್ಕಾಗಲ್ಲ. ಆದರೂ ಎಂಇಎಸ್ ನವರು ಕರ್ನಾಟಕಕ್ಕೆ ಮಾಡಿದ ಅನ್ಯಾಯವನ್ನು ನೋಡಲಿ ಎಂದು ಬೆಳಗಾವಿ ಜಿಲ್ಲೆ ಘಟಪ್ರಭಾದಲ್ಲಿ ಸತೀಶ್ ಜಾರಕಿಹೊಳಿ ಹೇಳಿದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications